Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...