Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...