Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....