Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...