Homeಸಿನಿಮಾಕ್ರೀಡೆಅಕ್ಟೋಬರ್ 23 ರಂದು ಭಾರತ-ಪಾಕ್ ಹಣಾಹಣಿ: ಟಿ20 ವಿಶ್ವಕಪ್‌ನಿಂದ ಜಸ್ಪ್ರಿತ್ ಬೂಮ್ರ ಹೊರಕ್ಕೆ

ಅಕ್ಟೋಬರ್ 23 ರಂದು ಭಾರತ-ಪಾಕ್ ಹಣಾಹಣಿ: ಟಿ20 ವಿಶ್ವಕಪ್‌ನಿಂದ ಜಸ್ಪ್ರಿತ್ ಬೂಮ್ರ ಹೊರಕ್ಕೆ

- Advertisement -
- Advertisement -

ಅಕ್ಟೋಬರ್ 16ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 23ರಂದು ಎದುರಿಸಲಿದೆ. ಈ ಸಂದರ್ಭದಲ್ಲಿಯೇ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯ ಸುದ್ದಿಯೊಂದು ಅಪ್ಪಳಿಸಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್ಪ್ರಿತ್ ಬೂಮ್ರ ಇಡೀ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಸದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿಪಕ್ಷೀಯ ಸರಣಿಯಲ್ಲಿಯೂ ಸಹ ಬೂಮ್ರ ಕಣಕ್ಕಿಳಿಯಲಿಲ್ಲ. ಸೆಪ್ಟಂಬರ್ 28 ರಂದು ತಿರುವನಂತಪುರಂನಲ್ಲಿ ನಡೆದ ಮೊದಲ ಪಂದ್ಯದ ಟಾಸ್ ಮುನ್ನವೆ ಅವರು ಬೂಮ್ರ ಅವರ ಗಾಯದ ಕುರಿತು ಬಿಸಿಸಿಐ ಮಾಹಿತಿ ನೀಡಿತ್ತು.

ಬೂಮ್ರ ಗಾಯದ ಕಾರಣದಿಂದಾಗಿ ಏಷ್ಯಾಕಪ್‌ನಲ್ಲಿಯೂ ಕಣಕ್ಕಿಳಿದಿರಲಿಲ್ಲ. ಏಷ್ಯಾ ಕಪ್‌ನಲ್ಲಿ ಭಾರತದ ಬೌಲಿಂಗ್ ಕೊರತೆಯಿಂದಾಗಿಯೇ ಭಾರತವು ಫೈನಲ್‌ ತಲುಪಲು ಸಾಧ್ಯವಾಗಿರಲಿಲ್ಲ. ಆನಂತರ ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳನ್ನು ಬೂಮ್ರ ಆಡಿದ್ದರು. ಯಾರ್ಕರ್‌ಗಳಿಗೆ ಖ್ಯಾತಿಯಾಗಿರುವ ಬೂಮ್ರ ಭಾರತದ ಬೌಲಿಂಗ್ ಬೆನ್ನೆಲುಬು ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಿಂಚ್‌ ಅವರನ್ನು ಯಾರ್ಕರ್‌ ಬೌಲ್ ಹಾಕಿ ಬೌಲ್ಡ್ ಮಾಡಿದಾಗ ಸ್ವತಃ ಫಿಂಚ್ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದ್ದರು.

ಸದ್ಯ ಬೂಮ್ರ ಹೊರಗುಳಿಯುತ್ತಿರುವುದರಿಂದ ಅವರ ಸ್ಥಾನವನ್ನು ಮೊಹಮ್ಮದ್ ಶಮಿ ಅಥವಾ ದೀಪಕ್ ಚಹರ್ ತುಂಬುವ ಸಾಧ್ಯತೆ ಇದೆ. ದೀಪಕ್ ಚಹರ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ 2 ಮಹತ್ವದ ವಿಕೆಟ್ ಪಡೆದಿದ್ದರು. ಅಲ್ಲದೆ ಬ್ಯಾಟ್ ಮಾಡುವ ಸಾಮರ್ಥ್ಯವು ಅವರಿಗಿರುವುದರಿಂದ ಅವರೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ.

ಅಂತಿಮ ಓವರ್‌ಗಳಲ್ಲಿ ಕಳಪೆ ಬೌಲಿಂಗ್ ಪ್ರದರ್ಶನವು ಭಾರತ ತಂಡವನ್ನು ಕಾಡುತ್ತಿದೆ. ಭುವನೇಶ್ವರ್ ಕುಮಾರ್ ಅಂತಿಮ ಓವರ್‌ಗಳಲ್ಲಿ ವಿಫಲರಾಗಿದ್ದಾರೆ. ಕೆಲವೊಮ್ಮೆ ಹರ್ಷಲ್ ಪಟೇಲ್ ಸಹ ದುಬಾರಿಯೆನಿಸಿದ್ದಾರೆ. ಇದು ತಂಡದ ನಾಯಕ ರೋಹಿತ್ ಶರ್ಮಾರನ್ನು ಚಿಂತೆಗೀಡುಮಾಡಿದೆ. ಕಳೆದ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ವಿಫಲವಾಗಿದ್ದರೆ ಈಗ ಸದ್ಯ ಅಂತಿಮ ಓವರ್‌ಗಳ ಬೌಲಿಂಗ್ ಸಮಸ್ಯೆಯಾಗಿ ಪರಿಣಮಿಸಿದೆ.

ಈಗಾಗಲೇ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಸಹ ಮಂಡಿ ನೋವಿನ ಸಮಸ್ಯೆಯಿಂದಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಅವರೊಡನೆ ಬೂಮ್ರ ಸಹ ಸೇರಿಕೊಂಡಿದ್ದಾರೆ. ಈ ಒತ್ತಡವನ್ನು ಭಾರತ ತಂಡ ಹೇಗೆ ನಿಭಾಯಿಸುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...