Homeಮುಖಪುಟಭಾರತ-ಪಾಕ್ ಸಂಘರ್ಷ: ನಾವು ಹಲವು ಯುದ್ದವಿಮಾನಗಳನ್ನು ಕಳೆದುಕೊಂಡಿದ್ದು ನಿಜ, ಅದು ಹೇಗೆಂದು ಹೇಳಿದ ನೌಕಾಪಡೆ ಅಧಿಕಾರಿ

ಭಾರತ-ಪಾಕ್ ಸಂಘರ್ಷ: ನಾವು ಹಲವು ಯುದ್ದವಿಮಾನಗಳನ್ನು ಕಳೆದುಕೊಂಡಿದ್ದು ನಿಜ, ಅದು ಹೇಗೆಂದು ಹೇಳಿದ ನೌಕಾಪಡೆ ಅಧಿಕಾರಿ

- Advertisement -
- Advertisement -

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ತಾಣಗಳ ಮೇಲೆ ಭಾರತೀಯ ವಾಯುಪಡೆ (IAF)ಯು 2025ರ ಮೇ 7ರ ರಾತ್ರಿ ನಡೆಸಿದ ದಾಳಿಯ ವೇಳೆ ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿತು. ಈ ನಷ್ಟಕ್ಕೆ “ರಾಜಕೀಯ ನಾಯಕತ್ವದಿಂದ ವಿಧಿಸಲಾದ ನಿರ್ಬಂಧಗಳೇ” ಕಾರಣ ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ನೌಕಾಪಡೆಯ ಅಧಿಕಾರಿ ಶಿವ್ ಕುಮಾರ್ ಕಳೆದ ತಿಂಗಳು ಇಂಡೋನೇಷ್ಯಾದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಮಿಲಿಟರಿ ನೆಲೆಗಳು ಅಥವಾ ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡದಂತೆ IAF ಗೆ ಸೂಚಿಸಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ಜೂನ್ 10ರಂದು ಇಂಡೋನೇಷ್ಯಾದಲ್ಲಿ ನಡೆದ ಈ ವಿಚಾರ ಸಂಕಿರಣದಲ್ಲಿ ಕ್ಯಾಪ್ಟನ್ ಶಿವ್ ಕುಮಾರ್ ಈ ಕುರಿತು ಮಾತನಾಡಿದರು. ತಮ್ಮ 35 ನಿಮಿಷಗಳ ಪ್ರಸ್ತುತಿಯಲ್ಲಿ, ಭಾರತವು ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂಬುದನ್ನು ಅವರು ಒಪ್ಪಿಕೊಂಡರು.

ಪಾಕಿಸ್ತಾನಿ ಸೇನೆಯು ರಫೇಲ್‌ಗಳು ಸೇರಿದಂತೆ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಿದ್ದಾಗಿ ಹೇಳಿಕೊಂಡಿದೆ. ಆದರೆ, ಭಾರತೀಯ ವಾಯುಪಡೆ (IAF) ಆರಂಭಿಕ ವೈಮಾನಿಕ ಸಂಘರ್ಷದಲ್ಲಿ ನಷ್ಟ ಅನುಭವಿಸಿದ್ದನ್ನು ದೃಢಪಡಿಸಿದೆ. ಆದರೆ ಕಳೆದುಕೊಂಡ ವಿಮಾನಗಳ ನಿಖರ ಸಂಖ್ಯೆಯನ್ನು ಸ್ಪಷ್ಟಪಡಿಸಲಿಲ್ಲ.

ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ, ಸಿಂಗಾಪುರದಲ್ಲಿ ಮಾತನಾಡಿದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾನ್, “ಜೆಟ್‌ಗಳು ಕೆಳಗೆ ಬಿದ್ದಿರುವುದಕ್ಕಿಂತ, ಅವು ಏಕೆ ಕೆಳಗೆ ಬಿದ್ದವು ಎಂಬುದು ಮುಖ್ಯ” ಎಂದು ಒತ್ತಿ ಹೇಳಿದರು.

ಈ ಯುದ್ಧ ವಿಮಾನಗಳ ನಷ್ಟದ ನಂತರ, ಭಾರತೀಯ ವಾಯುಪಡೆ (IAF) ತನ್ನ ತಂತ್ರಗಳನ್ನು ಬದಲಾಯಿಸಿತು ಎಂದು ಕ್ಯಾಪ್ಟನ್ ಶಿವ್ ಕುಮಾರ್ ವಿವರಿಸಿದರು. IAF ಪಾಕ್ ಮಿಲಿಟರಿ ನೆಲೆಗಳತ್ತ ಗಮನಹರಿಸಿತು ಮತ್ತು ಮೊದಲಿಗೆ ಶತ್ರು ವಾಯುರಕ್ಷಣೆಗಳನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಯಿತು. ಇದರಿಂದ, 2025ರ ಮೇ 10ರಂದು ನಡೆದ ದಾಳಿಗಳಲ್ಲಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿಕೊಂಡು ಎಲ್ಲಾ ಪಾಕ್ ದಾಳಿಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಾಯಿತು ಎಂದರು.

ನೌಕಾಪಡೆಯ ಅಧಿಕಾರಿಯ ಈ ಹೇಳಿಕೆಯು, ಮೋದಿ ಸರ್ಕಾರವು IAF ಗೆ ವಿಧಿಸಿದ್ದ ಕಟ್ಟುನಿಟ್ಟಾದ ರಾಜಕೀಯ ಆದೇಶಗಳನ್ನು ಎತ್ತಿ ತೋರಿಸುತ್ತದೆ. ಈ ಆದೇಶದ ಪ್ರಕಾರ, ಪಾಕಿಸ್ತಾನಿ ಮಿಲಿಟರಿ ನೆಲೆಗಳು ಅಥವಾ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಬಾರದಾಗಿತ್ತು. ಪರಮಾಣು ಯುದ್ಧದ ಉಲ್ಬಣವನ್ನು ತಡೆಯುವ ಉದ್ದೇಶದಿಂದ ಸರ್ಕಾರವು ಈ ಸ್ವಯಂ-ನಿರ್ಬಂಧವನ್ನು ಹೇರಿತ್ತು. ಭಾರತವು ಪಾಕಿಸ್ತಾನದ ಯಾವುದೇ ಮಿಲಿಟರಿ ಗುರಿಗಳನ್ನು ಹೊಡೆಯದಿದ್ದಾಗ, ಪಾಕಿಸ್ತಾನಿ ಸೇನೆಯು ಭಾರತೀಯ ವಾಯುಪ್ರದೇಶದಲ್ಲಿ ಹಾರುವ ಭಾರತೀಯ ವಿಮಾನಗಳನ್ನು ಗುರಿಯಾಗಿಸುವುದಿಲ್ಲ ಎಂಬ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಂದಾಜಿಸಲಾಗಿದೆ.

ಆದರೆ, ಪಾಕಿಸ್ತಾನ ಅಂತಹ ಯಾವುದೇ ನಿರ್ಬಂಧಗಳನ್ನು ಒಪ್ಪಿಕೊಳ್ಳಲಿಲ್ಲ. ಪಾಕಿಸ್ತಾನದ ಉಪ ಮುಖ್ಯಸ್ಥರು ಹೇಳಿದಂತೆ, IAF ತನ್ನ ಅಸ್ತ್ರಗಳನ್ನು ಪಾಕಿಸ್ತಾನಿ ಭಯೋತ್ಪಾದಕ ತಾಣಗಳಿಗೆ ಕಳುಹಿಸಿದ ನಂತರ, ಪಾಕಿಸ್ತಾನ ವಾಯುಪಡೆಯು ತನ್ನ ಆದೇಶಗಳನ್ನು “ತಡೆಯುವಿಕೆಯಿಂದ ಸದೆಬಡಿಯುವತ್ತ” ಎಂದು ಬದಲಾಯಿಸಿತು. ಭಾರತದ ಈ ರಾಜಕೀಯ ನಿರ್ಧಾರಗಳಿಂದಾಗಿ, IAF ತನ್ನ ಕಾರ್ಯಾಚರಣೆಗಳಲ್ಲಿ ಅತ್ಯಂತ ಅಪಾಯಕಾರಿಯಾದ ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡದೆ ಬಿಡಬೇಕಾಯಿತು. ಇದೇ ಕಾರಣಕ್ಕೆ IAF ಯುದ್ಧ ವಿಮಾನಗಳನ್ನು ಕಳೆದುಕೊಂಡಿತು ಎಂದು ಶಿವಕುಮಾರ್ ಹೇಳಿದರು.

ಆದರೆ, ಈ ತಂತ್ರಗಾರಿಕೆಯ ನ್ಯೂನತೆಯನ್ನು ಕೂಡಲೇ ಸರಿಹೊಂದಿಸಲಾಯಿತು. ಇದರಿಂದಾಗಿ, 2025ರ ಮೇ 10ರ ಕಾರ್ಯಾಚರಣೆಗಳಲ್ಲಿ ಬ್ರಹ್ಮೋಸ್ ಮತ್ತು ಇತರ ಕ್ಷಿಪಣಿಗಳನ್ನು ದೂರದಿಂದಲೇ ಪಾಕಿಸ್ತಾನಿ ಗುರಿಗಳನ್ನು ನಿಖರವಾಗಿ ಹೊಡೆಯಲು IAF ಬಳಸಿತು ಎಂದು ಅವರು ತಿಳಿಸಿದರು.

ಈ ಘಟನೆಗಳ ನಡುವೆ, ಇಂಡೋನೇಷ್ಯಾದ ಜಕಾರ್ತಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕ್ಯಾಪ್ಟನ್ ಕುಮಾರ್ ಅವರ ಹೇಳಿಕೆಗಳನ್ನು “ತಪ್ಪಾಗಿ ನಿರೂಪಿಸಲಾಗಿದೆ” ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ವಿಚಾರಸಂಕೀರಣದಲ್ಲಿ ನೌಕಾಪಡೆ ಅಧಿಕಾರಿ ಮಾಡಿದ ಪ್ರಸ್ತುತಿಯ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ. ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಈ ವರದಿಗಳು ಭಾಷಣಕಾರರ ಪ್ರಸ್ತುತಿಯ ನಿಜವಾದ ಉದ್ದೇಶ ಹಾಗೂ ಒತ್ತುಕೊಟ್ಟಿದ್ದನ್ನು ಸರಿಯಾಗಿ ಬಿಂಬಿಸಿಲ್ಲ. ನಮ್ಮ ನೆರೆಹೊರೆಯ ಕೆಲವು ದೇಶಗಳಂತೆ ಅಲ್ಲದೆ, ಭಾರತೀಯ ಸಶಸ್ತ್ರ ಪಡೆಗಳು ನಾಗರಿಕ ರಾಜಕೀಯ ನಾಯಕತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರಸ್ತುತಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಆಪರೇಷನ್ ಸಿಂಧೂರ್‌ನ ಮುಖ್ಯ ಉದ್ದೇಶವು ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸುವುದು ಮತ್ತು ಭಾರತದ ಪ್ರತಿಕ್ರಿಯೆ ಯಾವುದೇ ಉಲ್ಬಣಕ್ಕೆ ಕಾರಣವಾಗದಿರುವುದು ಎಂದು ಸಹ ವಿವರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...