Homeಮುಖಪುಟಭಾರತ-ಪಾಕ್ ಸಂಘರ್ಷ: ನಾವು ಹಲವು ಯುದ್ದವಿಮಾನಗಳನ್ನು ಕಳೆದುಕೊಂಡಿದ್ದು ನಿಜ, ಅದು ಹೇಗೆಂದು ಹೇಳಿದ ನೌಕಾಪಡೆ ಅಧಿಕಾರಿ

ಭಾರತ-ಪಾಕ್ ಸಂಘರ್ಷ: ನಾವು ಹಲವು ಯುದ್ದವಿಮಾನಗಳನ್ನು ಕಳೆದುಕೊಂಡಿದ್ದು ನಿಜ, ಅದು ಹೇಗೆಂದು ಹೇಳಿದ ನೌಕಾಪಡೆ ಅಧಿಕಾರಿ

- Advertisement -
- Advertisement -

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ತಾಣಗಳ ಮೇಲೆ ಭಾರತೀಯ ವಾಯುಪಡೆ (IAF)ಯು 2025ರ ಮೇ 7ರ ರಾತ್ರಿ ನಡೆಸಿದ ದಾಳಿಯ ವೇಳೆ ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿತು. ಈ ನಷ್ಟಕ್ಕೆ “ರಾಜಕೀಯ ನಾಯಕತ್ವದಿಂದ ವಿಧಿಸಲಾದ ನಿರ್ಬಂಧಗಳೇ” ಕಾರಣ ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ನೌಕಾಪಡೆಯ ಅಧಿಕಾರಿ ಶಿವ್ ಕುಮಾರ್ ಕಳೆದ ತಿಂಗಳು ಇಂಡೋನೇಷ್ಯಾದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಮಿಲಿಟರಿ ನೆಲೆಗಳು ಅಥವಾ ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡದಂತೆ IAF ಗೆ ಸೂಚಿಸಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ಜೂನ್ 10ರಂದು ಇಂಡೋನೇಷ್ಯಾದಲ್ಲಿ ನಡೆದ ಈ ವಿಚಾರ ಸಂಕಿರಣದಲ್ಲಿ ಕ್ಯಾಪ್ಟನ್ ಶಿವ್ ಕುಮಾರ್ ಈ ಕುರಿತು ಮಾತನಾಡಿದರು. ತಮ್ಮ 35 ನಿಮಿಷಗಳ ಪ್ರಸ್ತುತಿಯಲ್ಲಿ, ಭಾರತವು ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂಬುದನ್ನು ಅವರು ಒಪ್ಪಿಕೊಂಡರು.

ಪಾಕಿಸ್ತಾನಿ ಸೇನೆಯು ರಫೇಲ್‌ಗಳು ಸೇರಿದಂತೆ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಿದ್ದಾಗಿ ಹೇಳಿಕೊಂಡಿದೆ. ಆದರೆ, ಭಾರತೀಯ ವಾಯುಪಡೆ (IAF) ಆರಂಭಿಕ ವೈಮಾನಿಕ ಸಂಘರ್ಷದಲ್ಲಿ ನಷ್ಟ ಅನುಭವಿಸಿದ್ದನ್ನು ದೃಢಪಡಿಸಿದೆ. ಆದರೆ ಕಳೆದುಕೊಂಡ ವಿಮಾನಗಳ ನಿಖರ ಸಂಖ್ಯೆಯನ್ನು ಸ್ಪಷ್ಟಪಡಿಸಲಿಲ್ಲ.

ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ, ಸಿಂಗಾಪುರದಲ್ಲಿ ಮಾತನಾಡಿದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾನ್, “ಜೆಟ್‌ಗಳು ಕೆಳಗೆ ಬಿದ್ದಿರುವುದಕ್ಕಿಂತ, ಅವು ಏಕೆ ಕೆಳಗೆ ಬಿದ್ದವು ಎಂಬುದು ಮುಖ್ಯ” ಎಂದು ಒತ್ತಿ ಹೇಳಿದರು.

ಈ ಯುದ್ಧ ವಿಮಾನಗಳ ನಷ್ಟದ ನಂತರ, ಭಾರತೀಯ ವಾಯುಪಡೆ (IAF) ತನ್ನ ತಂತ್ರಗಳನ್ನು ಬದಲಾಯಿಸಿತು ಎಂದು ಕ್ಯಾಪ್ಟನ್ ಶಿವ್ ಕುಮಾರ್ ವಿವರಿಸಿದರು. IAF ಪಾಕ್ ಮಿಲಿಟರಿ ನೆಲೆಗಳತ್ತ ಗಮನಹರಿಸಿತು ಮತ್ತು ಮೊದಲಿಗೆ ಶತ್ರು ವಾಯುರಕ್ಷಣೆಗಳನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಯಿತು. ಇದರಿಂದ, 2025ರ ಮೇ 10ರಂದು ನಡೆದ ದಾಳಿಗಳಲ್ಲಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿಕೊಂಡು ಎಲ್ಲಾ ಪಾಕ್ ದಾಳಿಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಾಯಿತು ಎಂದರು.

ನೌಕಾಪಡೆಯ ಅಧಿಕಾರಿಯ ಈ ಹೇಳಿಕೆಯು, ಮೋದಿ ಸರ್ಕಾರವು IAF ಗೆ ವಿಧಿಸಿದ್ದ ಕಟ್ಟುನಿಟ್ಟಾದ ರಾಜಕೀಯ ಆದೇಶಗಳನ್ನು ಎತ್ತಿ ತೋರಿಸುತ್ತದೆ. ಈ ಆದೇಶದ ಪ್ರಕಾರ, ಪಾಕಿಸ್ತಾನಿ ಮಿಲಿಟರಿ ನೆಲೆಗಳು ಅಥವಾ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಬಾರದಾಗಿತ್ತು. ಪರಮಾಣು ಯುದ್ಧದ ಉಲ್ಬಣವನ್ನು ತಡೆಯುವ ಉದ್ದೇಶದಿಂದ ಸರ್ಕಾರವು ಈ ಸ್ವಯಂ-ನಿರ್ಬಂಧವನ್ನು ಹೇರಿತ್ತು. ಭಾರತವು ಪಾಕಿಸ್ತಾನದ ಯಾವುದೇ ಮಿಲಿಟರಿ ಗುರಿಗಳನ್ನು ಹೊಡೆಯದಿದ್ದಾಗ, ಪಾಕಿಸ್ತಾನಿ ಸೇನೆಯು ಭಾರತೀಯ ವಾಯುಪ್ರದೇಶದಲ್ಲಿ ಹಾರುವ ಭಾರತೀಯ ವಿಮಾನಗಳನ್ನು ಗುರಿಯಾಗಿಸುವುದಿಲ್ಲ ಎಂಬ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಂದಾಜಿಸಲಾಗಿದೆ.

ಆದರೆ, ಪಾಕಿಸ್ತಾನ ಅಂತಹ ಯಾವುದೇ ನಿರ್ಬಂಧಗಳನ್ನು ಒಪ್ಪಿಕೊಳ್ಳಲಿಲ್ಲ. ಪಾಕಿಸ್ತಾನದ ಉಪ ಮುಖ್ಯಸ್ಥರು ಹೇಳಿದಂತೆ, IAF ತನ್ನ ಅಸ್ತ್ರಗಳನ್ನು ಪಾಕಿಸ್ತಾನಿ ಭಯೋತ್ಪಾದಕ ತಾಣಗಳಿಗೆ ಕಳುಹಿಸಿದ ನಂತರ, ಪಾಕಿಸ್ತಾನ ವಾಯುಪಡೆಯು ತನ್ನ ಆದೇಶಗಳನ್ನು “ತಡೆಯುವಿಕೆಯಿಂದ ಸದೆಬಡಿಯುವತ್ತ” ಎಂದು ಬದಲಾಯಿಸಿತು. ಭಾರತದ ಈ ರಾಜಕೀಯ ನಿರ್ಧಾರಗಳಿಂದಾಗಿ, IAF ತನ್ನ ಕಾರ್ಯಾಚರಣೆಗಳಲ್ಲಿ ಅತ್ಯಂತ ಅಪಾಯಕಾರಿಯಾದ ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡದೆ ಬಿಡಬೇಕಾಯಿತು. ಇದೇ ಕಾರಣಕ್ಕೆ IAF ಯುದ್ಧ ವಿಮಾನಗಳನ್ನು ಕಳೆದುಕೊಂಡಿತು ಎಂದು ಶಿವಕುಮಾರ್ ಹೇಳಿದರು.

ಆದರೆ, ಈ ತಂತ್ರಗಾರಿಕೆಯ ನ್ಯೂನತೆಯನ್ನು ಕೂಡಲೇ ಸರಿಹೊಂದಿಸಲಾಯಿತು. ಇದರಿಂದಾಗಿ, 2025ರ ಮೇ 10ರ ಕಾರ್ಯಾಚರಣೆಗಳಲ್ಲಿ ಬ್ರಹ್ಮೋಸ್ ಮತ್ತು ಇತರ ಕ್ಷಿಪಣಿಗಳನ್ನು ದೂರದಿಂದಲೇ ಪಾಕಿಸ್ತಾನಿ ಗುರಿಗಳನ್ನು ನಿಖರವಾಗಿ ಹೊಡೆಯಲು IAF ಬಳಸಿತು ಎಂದು ಅವರು ತಿಳಿಸಿದರು.

ಈ ಘಟನೆಗಳ ನಡುವೆ, ಇಂಡೋನೇಷ್ಯಾದ ಜಕಾರ್ತಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕ್ಯಾಪ್ಟನ್ ಕುಮಾರ್ ಅವರ ಹೇಳಿಕೆಗಳನ್ನು “ತಪ್ಪಾಗಿ ನಿರೂಪಿಸಲಾಗಿದೆ” ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ವಿಚಾರಸಂಕೀರಣದಲ್ಲಿ ನೌಕಾಪಡೆ ಅಧಿಕಾರಿ ಮಾಡಿದ ಪ್ರಸ್ತುತಿಯ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ. ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಈ ವರದಿಗಳು ಭಾಷಣಕಾರರ ಪ್ರಸ್ತುತಿಯ ನಿಜವಾದ ಉದ್ದೇಶ ಹಾಗೂ ಒತ್ತುಕೊಟ್ಟಿದ್ದನ್ನು ಸರಿಯಾಗಿ ಬಿಂಬಿಸಿಲ್ಲ. ನಮ್ಮ ನೆರೆಹೊರೆಯ ಕೆಲವು ದೇಶಗಳಂತೆ ಅಲ್ಲದೆ, ಭಾರತೀಯ ಸಶಸ್ತ್ರ ಪಡೆಗಳು ನಾಗರಿಕ ರಾಜಕೀಯ ನಾಯಕತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರಸ್ತುತಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಆಪರೇಷನ್ ಸಿಂಧೂರ್‌ನ ಮುಖ್ಯ ಉದ್ದೇಶವು ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸುವುದು ಮತ್ತು ಭಾರತದ ಪ್ರತಿಕ್ರಿಯೆ ಯಾವುದೇ ಉಲ್ಬಣಕ್ಕೆ ಕಾರಣವಾಗದಿರುವುದು ಎಂದು ಸಹ ವಿವರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...