Homeಸಿನಿಮಾಕ್ರೀಡೆಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ - ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಆರಂಭವಾಗಿದ್ದು ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಅಷ್ಟು ಮಾತ್ರವಲ್ಲದೇ ಇನ್ನೂ 13 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಹಾಂಕಾಂಗ್‌ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಭಾರತ ಪಾಕ್ ನಡುವಿನ ಆಗಸ್ಟ್ 28 ರಂದು ಮೊದಲ ಪಂದ್ಯ ಮುಗಿದಿದೆ. ಭಾರತ ಮತ್ತು ಪಾಕ್ ತನ್ನ ಉಳಿದ ಒಂದೊಂದು ಪಂದ್ಯವನ್ನು ಹಾಂಕಾಂಗ್ ವಿರುದ್ಧ ಸೆಣಸಲಿದ್ದು ಅಲ್ಲಿ ಗೆದ್ದರೆ ಎರಡೂ ತಂಡಗಳು ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಇದನ್ನೂ ಓದಿ: ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...