Homeಸಿನಿಮಾಕ್ರೀಡೆಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ - ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಆರಂಭವಾಗಿದ್ದು ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಅಷ್ಟು ಮಾತ್ರವಲ್ಲದೇ ಇನ್ನೂ 13 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಹಾಂಕಾಂಗ್‌ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಭಾರತ ಪಾಕ್ ನಡುವಿನ ಆಗಸ್ಟ್ 28 ರಂದು ಮೊದಲ ಪಂದ್ಯ ಮುಗಿದಿದೆ. ಭಾರತ ಮತ್ತು ಪಾಕ್ ತನ್ನ ಉಳಿದ ಒಂದೊಂದು ಪಂದ್ಯವನ್ನು ಹಾಂಕಾಂಗ್ ವಿರುದ್ಧ ಸೆಣಸಲಿದ್ದು ಅಲ್ಲಿ ಗೆದ್ದರೆ ಎರಡೂ ತಂಡಗಳು ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಇದನ್ನೂ ಓದಿ: ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...