Homeಸಿನಿಮಾಕ್ರೀಡೆಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ - ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಆರಂಭವಾಗಿದ್ದು ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಅಷ್ಟು ಮಾತ್ರವಲ್ಲದೇ ಇನ್ನೂ 13 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಹಾಂಕಾಂಗ್‌ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಭಾರತ ಪಾಕ್ ನಡುವಿನ ಆಗಸ್ಟ್ 28 ರಂದು ಮೊದಲ ಪಂದ್ಯ ಮುಗಿದಿದೆ. ಭಾರತ ಮತ್ತು ಪಾಕ್ ತನ್ನ ಉಳಿದ ಒಂದೊಂದು ಪಂದ್ಯವನ್ನು ಹಾಂಕಾಂಗ್ ವಿರುದ್ಧ ಸೆಣಸಲಿದ್ದು ಅಲ್ಲಿ ಗೆದ್ದರೆ ಎರಡೂ ತಂಡಗಳು ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಇದನ್ನೂ ಓದಿ: ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...