Homeಸಿನಿಮಾಕ್ರೀಡೆಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ - ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಆರಂಭವಾಗಿದ್ದು ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಅಷ್ಟು ಮಾತ್ರವಲ್ಲದೇ ಇನ್ನೂ 13 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಹಾಂಕಾಂಗ್‌ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಭಾರತ ಪಾಕ್ ನಡುವಿನ ಆಗಸ್ಟ್ 28 ರಂದು ಮೊದಲ ಪಂದ್ಯ ಮುಗಿದಿದೆ. ಭಾರತ ಮತ್ತು ಪಾಕ್ ತನ್ನ ಉಳಿದ ಒಂದೊಂದು ಪಂದ್ಯವನ್ನು ಹಾಂಕಾಂಗ್ ವಿರುದ್ಧ ಸೆಣಸಲಿದ್ದು ಅಲ್ಲಿ ಗೆದ್ದರೆ ಎರಡೂ ತಂಡಗಳು ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಇದನ್ನೂ ಓದಿ: ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...