Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...