Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...

ಬಲವಂತದ ಮದುವೆಗೆ ಒಪ್ಪದ ಅಪ್ರಾಪ್ತ ಬಾಲಕಿಯ ಅಪಹರಣ: ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಾಯಿ ಆರೋಪ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು ಬಲವಂತದ ಮದುವೆಗೆ ಒತ್ತಡದ ನಡುವೆ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸ್ ದೂರು ನೀಡಿ ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ಸ್ಥಳೀಯ ಅಧಿಕಾರಿಗಳು...

ಶೇ. 50ಕ್ಕಿಂತ ಹೆಚ್ಚಿನ ಬೆಲೆಗೆ ಅದಾನಿಯಿಂದ ವಿದ್ಯುತ್ ಖರೀದಿಗೆ ಒಪ್ಪಿದ್ದ ಹಸಿನಾ

ಪ್ರಧಾನಮಂತ್ರಿ ಪಟ್ಟದಿಂದ ಪದಚ್ಯುತಗೊಂಡ ಶೇಖ್ ಹಸೀನಾ ಅವರ ಅವಧಿಯಲ್ಲಿ ಸಹಿ ಹಾಕಲಾದ ಒಪ್ಪಂದಗಳ ಬಗ್ಗೆ ತನಿಖೆ ಮಾಡಲು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ರಚಿಸಿದ ಪರಿಶೀಲನಾ ಸಮಿತಿಯು, ಅದಾನಿ ಗ್ರೂಪ್‌ನೊಂದಿಗಿನ ವಿದ್ಯುತ್ ಖರೀದಿ ಒಪ್ಪಂದದಲ್ಲಿ...

‘ಪಾಕಿಸ್ತಾನ ಭಯೋತ್ಪಾದನೆಯನ್ನು ತನ್ನ ರಾಷ್ಟ್ರ ನೀತಿಯ ಸಾಧನವಾಗಿ ಬಳಸುವುದನ್ನು ಸಹಿಸಿಕೊಳ್ಳುವುದು ಸಾಮಾನ್ಯವಲ್ಲ’: ಭಾರತ

ವಿಶ್ವಸಂಸ್ಥೆ: ಆಪರೇಷನ್ ಸಿಂಧೂರ್ ಬಗ್ಗೆ "ಸುಳ್ಳು ಮತ್ತು ಸ್ವಾರ್ಥಪರ" ವರದಿಯನ್ನು ಮುಂದಿಟ್ಟಿದ್ದಕ್ಕಾಗಿ ಇಸ್ಲಾಮಾಬಾದ್‌ನ ರಾಯಭಾರಿಗೆ ಭಾರತ ತಿರುಗೇಟು ನೀಡುತ್ತಿದ್ದಂತೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಕಠಿಣ ಪದಗಳಲ್ಲಿ ಪ್ರತಿಕ್ರಿಯಿಸಿತು. ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ...