ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ
ವಿಡಿಯೊ ಗೇಮ್ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.
ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.
ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ
ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.
ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.
ಕನ್ನಡ ಮಾಧ್ಯಮ ಕನ್ನಡಫಸ್ಟ್ ನ್ಯೂಸ್, ಐಎನ್ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ
ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ



