Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...