Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...