Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...