Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...