Homeಅಂತರಾಷ್ಟ್ರೀಯಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

- Advertisement -
- Advertisement -

| ಅನಿಲ್ ಕುಮಾರ್ ಗುನ್ನಾಪುರ್ |

ಇಂದು ಭಾರತ ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯವಿದೆ. ಕೋಟ್ಯಾಂತರ ಅಭಿಮಾನಿಗಳು ಈ ರಸದೌತಣವನ್ನು ಸವಿಯಲು ಕಾತುರರಾಗಿದ್ದಾರೆ. ಮಳೆ ಬರದಿದ್ದರೆ ಅತ್ಯುತ್ತಮ ಪಂದ್ಯವಾಗಲಿದೆ. ಆದರೆ ಇದೇ ಸಂದರ್ಭದಲ್ಲಿ ಕೆಲ ಮಾಧ್ಯಮಗಳು ಇದನ್ನು ಭಾರತ ಪಾಕ್ ನಡುವಿನ ಯುದ್ಧವೆಂಬಂತೆ ಬಿಂಬಿಸುತ್ತಿವೆ. ಪಾಕಿಸ್ತಾನ ಹಲವು ವಿಚಾರಗಳಲ್ಲಿ ತಪ್ಪು ಮಾಡಿದೆ. ಅದಕ್ಕಾಗಿ ಕಾನೂನು ಮತ್ತು ರಾಜತಾಂತ್ರಿಕ ರೀತಿಯ ಕ್ರಮಗಳಿಗೆ ಮುಂದಾಗಬೇಕೆ ಹೊರತು ಕ್ರೀಡಿಯಲ್ಲಿ ಯುದ್ದ ತರುವುದು ಸರಿಯಲ್ಲ. ಕ್ರೀಡೆ ಜಗತ್ತಿನ ಜನರ ಮನಸ್ಸುಗಳನ್ನು ಬೆಸೆಯುವ ಉದ್ದೇಶ ಹೊಂದಿದೆ. ಅದು ಸಾಧ್ಯವಾಗಲಿ ಎಂದು ಸರಿಯಾಗಿ ಎರಡು ವರ್ಷಗಳ ಹಿಂದೆ ಅನಿಲ್ ಕುಮಾರ್ ಗುನ್ನಾಪುರ್ ಬರೆದಿದ್ದ ಹೃದಯಸ್ಪರ್ಶಿ ಬರಹವನ್ನು ಇಲ್ಲಿ ಮತ್ತೆ ಪ್ರಕಟಿಸುತ್ತಿದ್ದೇವೆ.

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್  ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಗೆಲುವಿಗೆ ಕಾರಣನಾದ ಬ್ಯಾಟ್ಸ್ ಮನ್” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಚಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್….  ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ. ಸಲೀಸಾಗಿ ತನ್ನ ಸೇರುತ್ತಿದ್ದ ಬಾಲ್ ನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.

ಮತ್ತೆರೆಡು ರನ್ ಪಡೆದ ಬ್ಯಾಟ್ಸ್ ಮನ್  “ಶತಕ” ಭಾರಿಸಿ ಕುಣಿದಾಡುತ್ತಾನೆ. ನಂತರ “ಮ್ಯಾನ್ ಆಪ್ ದಿ ಮ್ಯಾಚ್” ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ.  ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ  ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರಿಂದು ನಮ್ಮಣ್ಣ ನಾನು ಕಾರಣಾಂತರಗಳಿಂದ  ದೂರಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮ್ಮ ನಡುವೆ ಮತ್ತಷ್ಟೂ ಕಂದಕ ಸೃಷ್ಟಿಮಾಡಿ ಬೇಳೆ ಬೇಯಿಸಿಕೊಳ್ಳಲು ಬರುವವರಿಗೆ ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು.

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ  ಅಭಿಪ್ರಾಯ  ಹೇಳುತ್ತಾನೆ.

ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಗೆದ್ದಿದ್ದೀರಿ ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು.

ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದು ನಾನು  ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ  ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....