Homeಅಂತರಾಷ್ಟ್ರೀಯಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

- Advertisement -
- Advertisement -

| ಅನಿಲ್ ಕುಮಾರ್ ಗುನ್ನಾಪುರ್ |

ಇಂದು ಭಾರತ ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯವಿದೆ. ಕೋಟ್ಯಾಂತರ ಅಭಿಮಾನಿಗಳು ಈ ರಸದೌತಣವನ್ನು ಸವಿಯಲು ಕಾತುರರಾಗಿದ್ದಾರೆ. ಮಳೆ ಬರದಿದ್ದರೆ ಅತ್ಯುತ್ತಮ ಪಂದ್ಯವಾಗಲಿದೆ. ಆದರೆ ಇದೇ ಸಂದರ್ಭದಲ್ಲಿ ಕೆಲ ಮಾಧ್ಯಮಗಳು ಇದನ್ನು ಭಾರತ ಪಾಕ್ ನಡುವಿನ ಯುದ್ಧವೆಂಬಂತೆ ಬಿಂಬಿಸುತ್ತಿವೆ. ಪಾಕಿಸ್ತಾನ ಹಲವು ವಿಚಾರಗಳಲ್ಲಿ ತಪ್ಪು ಮಾಡಿದೆ. ಅದಕ್ಕಾಗಿ ಕಾನೂನು ಮತ್ತು ರಾಜತಾಂತ್ರಿಕ ರೀತಿಯ ಕ್ರಮಗಳಿಗೆ ಮುಂದಾಗಬೇಕೆ ಹೊರತು ಕ್ರೀಡಿಯಲ್ಲಿ ಯುದ್ದ ತರುವುದು ಸರಿಯಲ್ಲ. ಕ್ರೀಡೆ ಜಗತ್ತಿನ ಜನರ ಮನಸ್ಸುಗಳನ್ನು ಬೆಸೆಯುವ ಉದ್ದೇಶ ಹೊಂದಿದೆ. ಅದು ಸಾಧ್ಯವಾಗಲಿ ಎಂದು ಸರಿಯಾಗಿ ಎರಡು ವರ್ಷಗಳ ಹಿಂದೆ ಅನಿಲ್ ಕುಮಾರ್ ಗುನ್ನಾಪುರ್ ಬರೆದಿದ್ದ ಹೃದಯಸ್ಪರ್ಶಿ ಬರಹವನ್ನು ಇಲ್ಲಿ ಮತ್ತೆ ಪ್ರಕಟಿಸುತ್ತಿದ್ದೇವೆ.

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್  ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಗೆಲುವಿಗೆ ಕಾರಣನಾದ ಬ್ಯಾಟ್ಸ್ ಮನ್” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಚಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್….  ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ. ಸಲೀಸಾಗಿ ತನ್ನ ಸೇರುತ್ತಿದ್ದ ಬಾಲ್ ನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.

ಮತ್ತೆರೆಡು ರನ್ ಪಡೆದ ಬ್ಯಾಟ್ಸ್ ಮನ್  “ಶತಕ” ಭಾರಿಸಿ ಕುಣಿದಾಡುತ್ತಾನೆ. ನಂತರ “ಮ್ಯಾನ್ ಆಪ್ ದಿ ಮ್ಯಾಚ್” ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ.  ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ  ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರಿಂದು ನಮ್ಮಣ್ಣ ನಾನು ಕಾರಣಾಂತರಗಳಿಂದ  ದೂರಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮ್ಮ ನಡುವೆ ಮತ್ತಷ್ಟೂ ಕಂದಕ ಸೃಷ್ಟಿಮಾಡಿ ಬೇಳೆ ಬೇಯಿಸಿಕೊಳ್ಳಲು ಬರುವವರಿಗೆ ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು.

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ  ಅಭಿಪ್ರಾಯ  ಹೇಳುತ್ತಾನೆ.

ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಗೆದ್ದಿದ್ದೀರಿ ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು.

ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದು ನಾನು  ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ  ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...