Homeಅಂತರಾಷ್ಟ್ರೀಯಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

- Advertisement -
- Advertisement -

| ಅನಿಲ್ ಕುಮಾರ್ ಗುನ್ನಾಪುರ್ |

ಇಂದು ಭಾರತ ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯವಿದೆ. ಕೋಟ್ಯಾಂತರ ಅಭಿಮಾನಿಗಳು ಈ ರಸದೌತಣವನ್ನು ಸವಿಯಲು ಕಾತುರರಾಗಿದ್ದಾರೆ. ಮಳೆ ಬರದಿದ್ದರೆ ಅತ್ಯುತ್ತಮ ಪಂದ್ಯವಾಗಲಿದೆ. ಆದರೆ ಇದೇ ಸಂದರ್ಭದಲ್ಲಿ ಕೆಲ ಮಾಧ್ಯಮಗಳು ಇದನ್ನು ಭಾರತ ಪಾಕ್ ನಡುವಿನ ಯುದ್ಧವೆಂಬಂತೆ ಬಿಂಬಿಸುತ್ತಿವೆ. ಪಾಕಿಸ್ತಾನ ಹಲವು ವಿಚಾರಗಳಲ್ಲಿ ತಪ್ಪು ಮಾಡಿದೆ. ಅದಕ್ಕಾಗಿ ಕಾನೂನು ಮತ್ತು ರಾಜತಾಂತ್ರಿಕ ರೀತಿಯ ಕ್ರಮಗಳಿಗೆ ಮುಂದಾಗಬೇಕೆ ಹೊರತು ಕ್ರೀಡಿಯಲ್ಲಿ ಯುದ್ದ ತರುವುದು ಸರಿಯಲ್ಲ. ಕ್ರೀಡೆ ಜಗತ್ತಿನ ಜನರ ಮನಸ್ಸುಗಳನ್ನು ಬೆಸೆಯುವ ಉದ್ದೇಶ ಹೊಂದಿದೆ. ಅದು ಸಾಧ್ಯವಾಗಲಿ ಎಂದು ಸರಿಯಾಗಿ ಎರಡು ವರ್ಷಗಳ ಹಿಂದೆ ಅನಿಲ್ ಕುಮಾರ್ ಗುನ್ನಾಪುರ್ ಬರೆದಿದ್ದ ಹೃದಯಸ್ಪರ್ಶಿ ಬರಹವನ್ನು ಇಲ್ಲಿ ಮತ್ತೆ ಪ್ರಕಟಿಸುತ್ತಿದ್ದೇವೆ.

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್  ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಗೆಲುವಿಗೆ ಕಾರಣನಾದ ಬ್ಯಾಟ್ಸ್ ಮನ್” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಚಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್….  ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ. ಸಲೀಸಾಗಿ ತನ್ನ ಸೇರುತ್ತಿದ್ದ ಬಾಲ್ ನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.

ಮತ್ತೆರೆಡು ರನ್ ಪಡೆದ ಬ್ಯಾಟ್ಸ್ ಮನ್  “ಶತಕ” ಭಾರಿಸಿ ಕುಣಿದಾಡುತ್ತಾನೆ. ನಂತರ “ಮ್ಯಾನ್ ಆಪ್ ದಿ ಮ್ಯಾಚ್” ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ.  ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ  ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರಿಂದು ನಮ್ಮಣ್ಣ ನಾನು ಕಾರಣಾಂತರಗಳಿಂದ  ದೂರಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮ್ಮ ನಡುವೆ ಮತ್ತಷ್ಟೂ ಕಂದಕ ಸೃಷ್ಟಿಮಾಡಿ ಬೇಳೆ ಬೇಯಿಸಿಕೊಳ್ಳಲು ಬರುವವರಿಗೆ ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು.

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ  ಅಭಿಪ್ರಾಯ  ಹೇಳುತ್ತಾನೆ.

ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಗೆದ್ದಿದ್ದೀರಿ ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು.

ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದು ನಾನು  ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ  ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...