Homeಅಂತರಾಷ್ಟ್ರೀಯಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಹೀಗಾದರೆ ಹೇಗೆ..? 

- Advertisement -
- Advertisement -

| ಅನಿಲ್ ಕುಮಾರ್ ಗುನ್ನಾಪುರ್ |

ಇಂದು ಭಾರತ ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯವಿದೆ. ಕೋಟ್ಯಾಂತರ ಅಭಿಮಾನಿಗಳು ಈ ರಸದೌತಣವನ್ನು ಸವಿಯಲು ಕಾತುರರಾಗಿದ್ದಾರೆ. ಮಳೆ ಬರದಿದ್ದರೆ ಅತ್ಯುತ್ತಮ ಪಂದ್ಯವಾಗಲಿದೆ. ಆದರೆ ಇದೇ ಸಂದರ್ಭದಲ್ಲಿ ಕೆಲ ಮಾಧ್ಯಮಗಳು ಇದನ್ನು ಭಾರತ ಪಾಕ್ ನಡುವಿನ ಯುದ್ಧವೆಂಬಂತೆ ಬಿಂಬಿಸುತ್ತಿವೆ. ಪಾಕಿಸ್ತಾನ ಹಲವು ವಿಚಾರಗಳಲ್ಲಿ ತಪ್ಪು ಮಾಡಿದೆ. ಅದಕ್ಕಾಗಿ ಕಾನೂನು ಮತ್ತು ರಾಜತಾಂತ್ರಿಕ ರೀತಿಯ ಕ್ರಮಗಳಿಗೆ ಮುಂದಾಗಬೇಕೆ ಹೊರತು ಕ್ರೀಡಿಯಲ್ಲಿ ಯುದ್ದ ತರುವುದು ಸರಿಯಲ್ಲ. ಕ್ರೀಡೆ ಜಗತ್ತಿನ ಜನರ ಮನಸ್ಸುಗಳನ್ನು ಬೆಸೆಯುವ ಉದ್ದೇಶ ಹೊಂದಿದೆ. ಅದು ಸಾಧ್ಯವಾಗಲಿ ಎಂದು ಸರಿಯಾಗಿ ಎರಡು ವರ್ಷಗಳ ಹಿಂದೆ ಅನಿಲ್ ಕುಮಾರ್ ಗುನ್ನಾಪುರ್ ಬರೆದಿದ್ದ ಹೃದಯಸ್ಪರ್ಶಿ ಬರಹವನ್ನು ಇಲ್ಲಿ ಮತ್ತೆ ಪ್ರಕಟಿಸುತ್ತಿದ್ದೇವೆ.

ಇಂದಿನ ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್  ಪಂದ್ಯದಲ್ಲಿ ಹೀಗಾದರೆ ಹೇಗೆ..? 

ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಗೆಲುವಿಗೆ ಕಾರಣನಾದ ಬ್ಯಾಟ್ಸ್ ಮನ್” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಚಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್….  ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ. ಸಲೀಸಾಗಿ ತನ್ನ ಸೇರುತ್ತಿದ್ದ ಬಾಲ್ ನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.

ಮತ್ತೆರೆಡು ರನ್ ಪಡೆದ ಬ್ಯಾಟ್ಸ್ ಮನ್  “ಶತಕ” ಭಾರಿಸಿ ಕುಣಿದಾಡುತ್ತಾನೆ. ನಂತರ “ಮ್ಯಾನ್ ಆಪ್ ದಿ ಮ್ಯಾಚ್” ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ.  ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ  ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರಿಂದು ನಮ್ಮಣ್ಣ ನಾನು ಕಾರಣಾಂತರಗಳಿಂದ  ದೂರಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮ್ಮ ನಡುವೆ ಮತ್ತಷ್ಟೂ ಕಂದಕ ಸೃಷ್ಟಿಮಾಡಿ ಬೇಳೆ ಬೇಯಿಸಿಕೊಳ್ಳಲು ಬರುವವರಿಗೆ ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು.

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ  ಅಭಿಪ್ರಾಯ  ಹೇಳುತ್ತಾನೆ.

ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಗೆದ್ದಿದ್ದೀರಿ ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು.

ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದು ನಾನು  ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ  ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....