Homeಮುಖಪುಟಭಾರತ-ಪಾಕಿಸ್ತಾನ ಉದ್ವಿಗ್ನತೆ; ಹಲವು ದೇಶಗಳಿಂದ ತನ್ನ ಪ್ರಯಾಣಿಕರಿಕೆ ಎಚ್ಚರಿಕೆ ಸಂದೇಶ

ಭಾರತ-ಪಾಕಿಸ್ತಾನ ಉದ್ವಿಗ್ನತೆ; ಹಲವು ದೇಶಗಳಿಂದ ತನ್ನ ಪ್ರಯಾಣಿಕರಿಕೆ ಎಚ್ಚರಿಕೆ ಸಂದೇಶ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ತನ್ನ ದೇಶದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳದಂತೆ ಕಟ್ಟೆಚ್ಚರ ನೀಡಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಂತರ ಈ ಪ್ರಯಾಣ ನಿರ್ದೇಶನಗಳು ಬಂದಿವೆ.

ತನ್ನ ದೇಶದ ನಾಗರಿಕರಿಗೆ ಎಚ್ಚರಿಕೆ ನೀಡಿರುವ ಅಮೆರಿಕ, ತನ್ನ ದೇಶದ ಪ್ರಯಾಣಿಕರಿಗೆ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಕ್ಕೆ ತೆರಳದಂತೆ ಸೂಚಿಸಿದೆ. ಭಾರತ-ಪಾಕಿಸ್ತಾನ ಗಡಿ ಮತ್ತು ನಿಯಂತ್ರಣ ರೇಖೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆಯೂ ಅದು ನಾಗರಿಕರಿಗೆ ಸಲಹೆ ನೀಡಿದೆ.

ಅಮೆರಿಕ ವಿದೇಶಾಂಗ ಇಲಾಖೆಯು, ಪಾಕಿಸ್ತಾನಕ್ಕೆ ಸಾಮಾನ್ಯವಾಗಿ ಪ್ರಯಾಣವನ್ನು ಮರುಪರಿಶೀಲಿಸಿ ಎಂಬ ಸಲಹೆಯನ್ನು ಸಹ ನೀಡಿದೆ. “ಅಮೆರಿಕದ ನಾಗರಿಕರು ಸುರಕ್ಷಿತವಾಗಿ ಪ್ರಯಾಣ ರದ್ದು ಮಾಡುವುದು ಸಾಧ್ಯವಾದರೆ ಸಕ್ರಿಯ ಸಂಘರ್ಷದ ಪ್ರದೇಶಗಳನ್ನು ತೊರೆಯಲು ಅಥವಾ ಸ್ಥಳದಲ್ಲಿ ಆಶ್ರಯ ಪಡೆಯಲು ನಾವು ಸಲಹೆ ನೀಡುತ್ತೇವೆ” ಎಂದು ಉಲ್ಲೇಖಿಸಿದೆ.

ಭಾರತ ಮತ್ತು ಪಾಕಿಸ್ತಾನದ ಹಲವು ಪ್ರದೇಶಗಳಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣ ಎಚ್ಚರಿಕೆ ನೀಡಿದ ದೇಶಗಳ ಪಟ್ಟಿ ಹೀಗಿದೆ:

ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಕೆನಡಾ, ಆಸ್ಟ್ರೇಲಿಯಾ, ಚೀನಾ, ಸಿಂಗಾಪುರ, ನೆದರ್ಲ್ಯಾಂಡ್ಸ್, ಸ್ವೀಡನ್ ದೇಶಗಳು ಸೇರಿವೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ದೇಶದ ಹಲವಾರು ವಿಮಾನ ನಿಲ್ದಾಣಗಳು ಸ್ಥಗಿತಗೊಂಡ ನಂತರ ದೈನಂದಿನ ದೇಶೀಯ ವಿಮಾನ ಸಂಚಾರದ ಕನಿಷ್ಠ ಶೇಕಡಾ 11 ರಷ್ಟು ಪರಿಣಾಮ ಬೀರಿದೆ ಎಂದು ಶುಕ್ರವಾರ ದತ್ತಾಂಶಗಳು ತೋರಿಸಿವೆ.

ಉದ್ಯಮದ ಮಾಹಿತಿಯ ಪ್ರಕಾರ, ಸರಾಸರಿ ದೈನಂದಿನ ದೇಶೀಯ ವಿಮಾನಗಳು ಏಪ್ರಿಲ್‌ನಲ್ಲಿ 3,265 ರಿಂದ 2,907 ಕ್ಕೆ ಇಳಿದಿವೆ (ಮೇ 8 ರಂತೆ). ಮೇ 9–10 ರ ಅವಧಿಯಲ್ಲಿ ಸುಮಾರು 670 ವಿಮಾನಯಾನ ಮಾರ್ಗಗಳು ಪರಿಣಾಮ ಬೀರುತ್ತವೆ. ಇದರಲ್ಲಿ ಫ್ಲೈಟ್‌ರಾಡರ್ 24 ಡೇಟಾ ಪ್ರಕಾರ, ಮುಚ್ಚಲ್ಪಟ್ಟ 24 ವಿಮಾನ ನಿಲ್ದಾಣಗಳಲ್ಲಿ 334 ಒಳಬರುವ ಮತ್ತು 336 ಹೊರಹೋಗುವ ವಿಮಾನಗಳು ಸೇರಿವೆ.

ಶ್ರೀನಗರ, ಚಂಡೀಗಢ, ಅಮೃತಸರ, ಜಮ್ಮು ಮತ್ತು ಲೇಹ್ ವಿಮಾನ ನಿಲ್ದಾಣಗಳು ಹೆಚ್ಚು ಪರಿಣಾಮ ಬೀರುವ ಮಾರ್ಗಗಳಾಗಿವೆ. ಇತರ ಪ್ರಭಾವಿತ ವಿಮಾನ ನಿಲ್ದಾಣಗಳಲ್ಲಿ ಪಟಿಯಾಲ, ಭುಂತರ್, ಪಠಾಣ್‌ಕೋಟ್, ಬಿಕಾನೇರ್, ಜೈಸಲ್ಮೇರ್, ಮುಂದ್ರಾ, ಕೆಶೋದ್ ಮತ್ತು ರಾಜ್‌ಕೋಟ್ ಸೇರಿವೆ.

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...