Homeಕರ್ನಾಟಕಅಪಘಾನಿಸ್ತಾನಕ್ಕೆ ನೆರವು ನೀಡಿದ ಭಾರತ

ಅಪಘಾನಿಸ್ತಾನಕ್ಕೆ ನೆರವು ನೀಡಿದ ಭಾರತ

- Advertisement -
- Advertisement -

ಕಳೆದ ಆಗಸ್ಟ್‌ನಲ್ಲಿ ಕಾಬೂಲ್ಅನ್ನು ತಾಲಿಬಾನ್‌ ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ಭಾರತವು ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವನ್ನು ನೀಡಲು ಮುಂದಾಗಿದೆ. ಮಕ್ಕಳ ರಕ್ಷಣೆಗಾಗಿ ಮಕ್ಕಳ ಆಸ್ಪತ್ರೆಗಳಿಗೆ 1.6 ಟನ್ ತುರ್ತು ಔಷಧಿಗಳನ್ನು ಕಳುಹಿಸಿದೆ.

ಶುಕ್ರವಾರ ಕಾಬೂಲ್‌ನಿಂದ ದೆಹಲಿಗೆ 10 ಭಾರತೀಯರು ಮತ್ತು 94 ಅಫಘನ್ನರನ್ನು ಕರೆತಂದಿದ್ದ ರಿಟರ್ನ್ ವಿಮಾನದಲ್ಲಿ ಈ ಔಷಧಿಗಳನ್ನು ಕಳುಹಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನವು 50,000 ಮೆಟ್ರಿಕ್ ಟನ್ ಗೋಧಿಯನ್ನು ಪಾಕಿಸ್ತಾನದ ರಸ್ತೆ ಮೂಲಕ ಆಫ್ಘಾನಿಸ್ತಾನಕ್ಕೆ ಕಳುಹಿಸಲು ಚಿಂತನೆ ನಡೆಸುತ್ತಿದ್ದವು. ಈ ನಡುವೆಯೇ ಅಫ್ಘಾನ್‌ ವಿಮಾನ ಭಾರತಕ್ಕೆ ಬಂದಿದ್ದರಿಂದಾಗಿ ಆ ವಿಮಾನದಲ್ಲೇ ಔಷಧಿಯನ್ನು ರವಾನಿಸಿದೆ.

ಕಾಬೂಲ್‌ನಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯ ಪ್ರತಿನಿಧಿಗಳಿಗೆ ಔಷಧಿಗಳನ್ನು ಹಸ್ತಾಂತರಿಸಲಾಗುವುದು ಮತ್ತು ಕಾಬೂಲ್‌ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಅವುಗಳನ್ನು ಹಂಚಿಕೆ ಮಾಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.

ಅಫಘಾನ್‌‌ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಸೇರಿದಂತೆ ಭಾರತೀಯರು ಮತ್ತು 94 ಅಫಘನ್ನರನ್ನು ವಿಶೇಷ ವಿಮಾನವು ಕಾಬೂಲ್‌ನಿಂದ ನವದೆಹಲಿಗೆ ಶುಕ್ರವಾರ ಕರೆತಂದಿತು.

ಇದನ್ನೂ ಓದಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಇಲ್ಲಿಯವರೆಗೆ, ಅಫ್ಘಾನಿಸ್ತಾನದಿಂದ ಒಟ್ಟು 669 ಜನರನ್ನು ಸ್ಥಳಾಂತರಿಸಲಾಗಿದೆ. ಅವರಲ್ಲಿ 448 ಭಾರತೀಯರು ಮತ್ತು 206 ಅಘಫನ್ನರಿದ್ದಾರೆ. ಈ ಪೈಕಿ, ಆಫ್ಘನ್ ಹಿಂದೂ/ಸಿಖ್ ಅಲ್ಪಸಂಖ್ಯಾತ ಸಮುದಾಯದ ಜನರು ಸೇರಿದ್ದಾರೆ.

ಭೂ ಮಾರ್ಗದ ಮೂಲಕ ಅಫ್ಘಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸಾಗಿಸಲು ಯೋಜಿಸಲಾಗಿದೆ. ಇದಕ್ಕಾಗಿ, ಪಾಕಿಸ್ತಾನದ ರಸ್ತೆಯ ಮೂಲಕ 5,000 ಟ್ರಕ್‌ಗಳು ಹೋಗಬೇಕಾಗುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಘಾ-ಅಟ್ಟಾರಿ ಗಡಿಯಲ್ಲಿರುವ ಝೀರೋ ಪಾಯಿಂಟ್‌ನಲ್ಲಿ ಭಾರತೀಯ ಟ್ರಕ್‌ಗಳಿಂದ ಗೋಧಿಯನ್ನು ಇಳಿಸಿ, ಅವುಗಳನ್ನು ಅಫ್ಘಾನ್ ಟ್ರಕ್‌ಗಳಿಗೆ ಲೋಡ್ ಮಾಡಬೇಕಾಗುತ್ತದೆ ಎಂದು ಲಾಜಿಸ್ಟಿಕ್ಸ್ ಸೂಚಿಸುತ್ತದೆ.

“ಪಾಕಿಸ್ತಾನದ ಮೂಲಕ ಭಾರತವು ನೀಡುವ ಗೋಧಿಯನ್ನು ಸಾಗಿಸಲು “ಅಫಘಾನ್ ಸಹೋದರರ” ಮನವಿಯನ್ನು “ಅನುಕೂಲಕರವಾಗಿ ಪರಿಗಣಿಸುತ್ತೇವೆ” ಎಂದು ಕಳೆದ ತಿಂಗಳು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದ ತಾಲಿಬಾನ್ ನಿಯೋಗಕ್ಕೆ ತಿಳಿಸಿದ್ದಾರೆ.

ತಾಲಿಬಾನ್‌ನ ಹಣಕಾಸು, ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಹಾಗೂ ನಿಯೋಗದ ಹಿರಿಯ ಸದಸ್ಯರೊಂದಿಗೆ ಬಂದಿದ್ದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುಟ್ಟಾಕಿ ಅವರಿಗೆ ಇಮ್ರಾನ್ ಖಾನ್ ಇದನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...