Homeಕರ್ನಾಟಕಅಪಘಾನಿಸ್ತಾನಕ್ಕೆ ನೆರವು ನೀಡಿದ ಭಾರತ

ಅಪಘಾನಿಸ್ತಾನಕ್ಕೆ ನೆರವು ನೀಡಿದ ಭಾರತ

- Advertisement -
- Advertisement -

ಕಳೆದ ಆಗಸ್ಟ್‌ನಲ್ಲಿ ಕಾಬೂಲ್ಅನ್ನು ತಾಲಿಬಾನ್‌ ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ಭಾರತವು ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವನ್ನು ನೀಡಲು ಮುಂದಾಗಿದೆ. ಮಕ್ಕಳ ರಕ್ಷಣೆಗಾಗಿ ಮಕ್ಕಳ ಆಸ್ಪತ್ರೆಗಳಿಗೆ 1.6 ಟನ್ ತುರ್ತು ಔಷಧಿಗಳನ್ನು ಕಳುಹಿಸಿದೆ.

ಶುಕ್ರವಾರ ಕಾಬೂಲ್‌ನಿಂದ ದೆಹಲಿಗೆ 10 ಭಾರತೀಯರು ಮತ್ತು 94 ಅಫಘನ್ನರನ್ನು ಕರೆತಂದಿದ್ದ ರಿಟರ್ನ್ ವಿಮಾನದಲ್ಲಿ ಈ ಔಷಧಿಗಳನ್ನು ಕಳುಹಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನವು 50,000 ಮೆಟ್ರಿಕ್ ಟನ್ ಗೋಧಿಯನ್ನು ಪಾಕಿಸ್ತಾನದ ರಸ್ತೆ ಮೂಲಕ ಆಫ್ಘಾನಿಸ್ತಾನಕ್ಕೆ ಕಳುಹಿಸಲು ಚಿಂತನೆ ನಡೆಸುತ್ತಿದ್ದವು. ಈ ನಡುವೆಯೇ ಅಫ್ಘಾನ್‌ ವಿಮಾನ ಭಾರತಕ್ಕೆ ಬಂದಿದ್ದರಿಂದಾಗಿ ಆ ವಿಮಾನದಲ್ಲೇ ಔಷಧಿಯನ್ನು ರವಾನಿಸಿದೆ.

ಕಾಬೂಲ್‌ನಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯ ಪ್ರತಿನಿಧಿಗಳಿಗೆ ಔಷಧಿಗಳನ್ನು ಹಸ್ತಾಂತರಿಸಲಾಗುವುದು ಮತ್ತು ಕಾಬೂಲ್‌ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಅವುಗಳನ್ನು ಹಂಚಿಕೆ ಮಾಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.

ಅಫಘಾನ್‌‌ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಸೇರಿದಂತೆ ಭಾರತೀಯರು ಮತ್ತು 94 ಅಫಘನ್ನರನ್ನು ವಿಶೇಷ ವಿಮಾನವು ಕಾಬೂಲ್‌ನಿಂದ ನವದೆಹಲಿಗೆ ಶುಕ್ರವಾರ ಕರೆತಂದಿತು.

ಇದನ್ನೂ ಓದಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಇಲ್ಲಿಯವರೆಗೆ, ಅಫ್ಘಾನಿಸ್ತಾನದಿಂದ ಒಟ್ಟು 669 ಜನರನ್ನು ಸ್ಥಳಾಂತರಿಸಲಾಗಿದೆ. ಅವರಲ್ಲಿ 448 ಭಾರತೀಯರು ಮತ್ತು 206 ಅಘಫನ್ನರಿದ್ದಾರೆ. ಈ ಪೈಕಿ, ಆಫ್ಘನ್ ಹಿಂದೂ/ಸಿಖ್ ಅಲ್ಪಸಂಖ್ಯಾತ ಸಮುದಾಯದ ಜನರು ಸೇರಿದ್ದಾರೆ.

ಭೂ ಮಾರ್ಗದ ಮೂಲಕ ಅಫ್ಘಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸಾಗಿಸಲು ಯೋಜಿಸಲಾಗಿದೆ. ಇದಕ್ಕಾಗಿ, ಪಾಕಿಸ್ತಾನದ ರಸ್ತೆಯ ಮೂಲಕ 5,000 ಟ್ರಕ್‌ಗಳು ಹೋಗಬೇಕಾಗುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಘಾ-ಅಟ್ಟಾರಿ ಗಡಿಯಲ್ಲಿರುವ ಝೀರೋ ಪಾಯಿಂಟ್‌ನಲ್ಲಿ ಭಾರತೀಯ ಟ್ರಕ್‌ಗಳಿಂದ ಗೋಧಿಯನ್ನು ಇಳಿಸಿ, ಅವುಗಳನ್ನು ಅಫ್ಘಾನ್ ಟ್ರಕ್‌ಗಳಿಗೆ ಲೋಡ್ ಮಾಡಬೇಕಾಗುತ್ತದೆ ಎಂದು ಲಾಜಿಸ್ಟಿಕ್ಸ್ ಸೂಚಿಸುತ್ತದೆ.

“ಪಾಕಿಸ್ತಾನದ ಮೂಲಕ ಭಾರತವು ನೀಡುವ ಗೋಧಿಯನ್ನು ಸಾಗಿಸಲು “ಅಫಘಾನ್ ಸಹೋದರರ” ಮನವಿಯನ್ನು “ಅನುಕೂಲಕರವಾಗಿ ಪರಿಗಣಿಸುತ್ತೇವೆ” ಎಂದು ಕಳೆದ ತಿಂಗಳು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದ ತಾಲಿಬಾನ್ ನಿಯೋಗಕ್ಕೆ ತಿಳಿಸಿದ್ದಾರೆ.

ತಾಲಿಬಾನ್‌ನ ಹಣಕಾಸು, ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಹಾಗೂ ನಿಯೋಗದ ಹಿರಿಯ ಸದಸ್ಯರೊಂದಿಗೆ ಬಂದಿದ್ದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುಟ್ಟಾಕಿ ಅವರಿಗೆ ಇಮ್ರಾನ್ ಖಾನ್ ಇದನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...