Homeಮುಖಪುಟ'ಶಾಸ್ತ್ರ'ಗಳಿಗೆ ವಿರುದ್ಧವಾಗಿ 'ರಾಮಮಂದಿರ'ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

- Advertisement -
- Advertisement -

ರಾಮ ಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಹಾಗಾಗಿ ಪ್ರಾಣ ಪ್ರತಿಷ್ಠಾನ ‘ಶಾಸ್ತ್ರ’ಗಳಿಗೆ ವಿರುದ್ಧವಾದುದು ಎಂದು ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದ್ದು, ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ವಿಗ್ರಹ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಪುರಿಯ ಗೋವರ್ಧನ ಮಠದ ಮಠಾಧೀಶರು ವಿರೋಧ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ, ಉತ್ತರಾಖಂಡದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ದೇಶದ ಪ್ರಮುಖ ನಾಲ್ವರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ, ಈ ಸಮಾರಂಭವನ್ನು “ಶಾಸ್ತ್ರಗಳ ವಿರುದ್ಧ”  ಅಥವಾ ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ವಿಶೇಷವಾಗಿ ದೇವಾಲಯದ ನಿರ್ಮಾಣವು ಅಪೂರ್ಣವಾಗಿರುವ ವೇಳೆ ಪ್ರತಿಷ್ಠಾಪನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶಂಕರಾಚಾರ್ಯರು 4 ಮಠಗಳ ಪೈಕಿ ಒಂದು ಮಠದ ಮಠಾಧೀಶರಾಗಿದ್ದು, 8ನೆಯ ಶತಮಾನದಲ್ಲಿ ಹಿಂದೂ ಮಹರ್ಷಿ ಆದಿ ಶಂಕರ ಸ್ಥಾಪಿಸಿದ ಹಿಂದೂ ಅದ್ವೈತ ವೇದಾಂತ ಪರಂಪರೆಯ ಭಾಗವಾಗಿದ್ದಾರೆ. ಜ್ಯೋತಿರ್ಮಠ (ಜೋಶಿಮಠ),ಗೋವರ್ಧನ ಮಠ, ಶೃಂಗೇರಿ ಶಾರದಾ ಪೀಠ (ಕರ್ನಾಟಕ) ಹಾಗೂ ದ್ವಾರಕಾ ಶಾರದಾ ಪೀಠ (ಗುಜರಾತ್) ಎಂಬ ಮಠಗಳಿವೆ. ಆದಿ ಶಂಕರ ಮತ್ತು ಅವರ ಚಿಂತನೆಯ ಶೈವ ಪಂಥದಿಂದ ಪ್ರಭಾವಿತವಾಗಿದೆ. ಇದರಲ್ಲಿ ಶಿವನ ಆರಾಧನೆ, ಶಕ್ತಿಯ ಆರಾಧನೆ ಮಾಡುತ್ತಾರೆ.

ಜ್ಯೋತಿರ್ ಮಠದ 46ನೇ ಶಂಕರಾಚಾರ್ಯರಾದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ತಮ್ಮ ವೀಡಿಯೊದಲ್ಲಿ, ನಾಲ್ಕು ಶಂಕರಾಚಾರ್ಯರ ನಿರ್ಧಾರವನ್ನು “ಮೋದಿ ವಿರೋಧಿ” ಎಂದು ಅರ್ಥೈಸಬಾರದು ಆದರೆ ಅವರು “ಶಾಸ್ತ್ರ ವಿರೋಧಿ” ಆಗಲು ಬಯಸದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಾವು ಹೋಗದಿರಲು ಕಾರಣವೇನು? ಯಾವುದೇ ದ್ವೇಷದಿಂದಲ್ಲ, ಆದರೆ ಶಾಸ್ತ್ರ-ವಿಧಿಯನ್ನು ಅನುಸರಿಸುವುದು  ಶಂಕರಾಚಾರ್ಯರ ಕರ್ತವ್ಯವಾಗಿದೆ. ಇಲ್ಲಿ ಶಾಸ್ತ್ರ-ವಿಧಿಯನ್ನು ಕಡೆಗಣಿಸಲಾಗುತ್ತಿದೆ. ದೇವಾಲಯವು ಇನ್ನೂ ಅಪೂರ್ಣವಾಗಿರುವಾಗ ಪ್ರಾಣ ಪ್ರತಿಷ್ಠಾಪಣೆ ಮಾಡಬಾರದು. ನಾವು ಇದನ್ನು ಹೇಳಿದರೆ, ನಮ್ಮನ್ನು ‘ಮೋದಿ ವಿರೋಧಿ’ ಎಂದು ಕರೆಯಲಾಗುತ್ತದೆ. ಇಲ್ಲಿ ಮೋದಿ ವಿರೋಧಿ ಎಂದರೇನು? ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪ್ರಶ್ನಿಸಿದ್ದಾರೆ.

ಪುರಿಯ ಗೋವರ್ಧನ ಮಠದ ಮುಖ್ಯಸ್ಥ ನಿಶ್ಚಲಾನಂದ ಸರಸ್ವತಿ ಅವರು ತಮ್ಮ ಸ್ಥಾನದ ಘನತೆಯ ಬಗ್ಗೆ ಅರಿವು ಇರುವ ಕಾರಣ ಸಮಾರಂಭದಿಂದ ಹೊರಗುಳಿಯುವುದಾಗಿ ಘೋಷಿಸಿದ ಕೆಲವು ದಿನಗಳ ನಂತರ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ನಾನು ಅಲ್ಲಿ ಏನು ಮಾಡುತ್ತೇನೆ? ಮೋದಿ ರಾಮಮಂದಿರವನ್ನು ಉದ್ಘಾಟಿಸಿ, ವಿಗ್ರಹವನ್ನು ಸ್ಪರ್ಶಿಸಿದಾಗ ನಾನು ನಿಂತುಕೊಂಡು ಚಪ್ಪಾಳೆ ತಟ್ಟಲೆ? ನನಗೆ ಯಾವುದೇ ಸ್ಥಾನಮಾನ ಬೇಕಿಲ್ಲ. ನನಗೆ ಈಗಲೇ ದೊಡ್ಡ ಸ್ಥಾನವಿದೆ. ನನಗೆ ಯಾವುದೇ ಲಾಭ ಬೇಕಿಲ್ಲ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರು ಏನು ಮಾಡಬೇಕು? ಎಂದು ಅವರು ಪ್ರಶ‍್ನಿಸುತ್ತಿರುವ  ವಿಡಿಯೊವನ್ನು ನಾಗಾಲ್ಯಾಂಡ್ ಕಾಂಗ್ರೆಸ್ ಪೋಸ್ಟ್ ಮಾಡಿತ್ತು.

ವಿಡಿಯೋದಲ್ಲಿ ಅವರು, ಮೋದಿ ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಅಯೋಧ್ಯೆಯ ಬಗ್ಗೆ “ಯಾವುದೇ ದ್ವೇಷವಿಲ್ಲ”. ಇದು ಅಹಂಕಾರವಲ್ಲ. ಆದರೆ ನನ್ನ ಸ್ಥಾನದ ಘನತೆಯ ಬಗ್ಗೆ ನನಗೆ ಅರಿವಿದೆ, ಅದಕ್ಕಾಗಿಯೇ ನಾನು ಹೋಗುತ್ತಿಲ್ಲ. ನಾನು ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಬಹುದು ಎಂದು ಹೇಳುವ ಆಹ್ವಾನವನ್ನು ನಾನು ಸ್ವೀಕರಿಸಿದ್ದೇನೆ. ನಾನು ಒಬ್ಬ ವ್ಯಕ್ತಿಯನ್ನು ಏಕೆ ಕರೆದುಕೊಂಡು ಹೋಗಬೇಕು? ಎಂದು ಕೇಳಿದ್ದರು.

ವಿಶ‍್ವ ಹಿಂದೂ ಪರಿಷತ್‌ನ ಉಪಾಧ್ಯಕ್ಷ ಹಾಗೂ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಗಾಗಿ ರಚಿಸಲಾಗಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮಮಂದಿರ ವೈಷ್ಣವ ಪಂಥದ ರಮಾನಂದ ಸಂಪ್ರದಾಯಸ್ಥರಿಗೆ ಸೇರಿದೆ, ಸನ್ಯಾಸಿಗಳಿಗಾಗಲಿ, ಶೈವರಿಗಾಗಲಿ ಅಥವಾ ಶಾಕ್ತ ಪಂಥದವರಿಗಾಗಲಿ ಅಲ್ಲ ಎಂದು ‘ಅಮರ್ ಉಜಾಲ’ ಸುದ್ದಿ ಸಂಸ್ಥೆಗೆ ನೀಡಿದ್ದ ಸಂದರ್ಶನದಲ್ಲಿ  ಹೇಳಿಕೆ ನೀಡಿದ್ದರು.

ಅಪೂರ್ಣ ದೇವಾಲಯ

ಅವಿಮುಕ್ತೇಶ್ವರಾನಂದ ಸರಸ್ವತಿಯವರ ಪ್ರಕಾರ, ಪ್ರತಿಷ್ಠಾಪಣೆ ತುರ್ತಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಮಂದಿರ “ಸಂಪೂರ್ಣವಾಗಿ” ಪೂರ್ಣಗೊಳ್ಳುವವರೆಗೆ ಸರ್ಕಾರವು ಕಾಯಬಹುದಿತ್ತು. ಶಾಸ್ತ್ರಗಳ ವಿಷಯಕ್ಕೆ ಬಂದಾಗ ಇದು ದೊಡ್ಡ ತಪ್ಪಾಗಿದೆ. ನಾವು ಧರ್ಮ ಶಾಸ್ತ್ರಗಳ ಪ್ರಕಾರ ಕಾರ್ಯನಿರ್ವಹಿಸಲು ಬಯಸುತ್ತೇವೆ ಮತ್ತು ಜನರು ಅದೇ ರೀತಿ ಮಾಡಬೇಕೆಂದು ಬಯಸುತ್ತೇವೆ. ಏಕೆಂದರೆ ಪುಣ್ಯ-ಪಾಪ್ (ಒಳ್ಳೆಯ ಕಾರ್ಯಗಳು ಮತ್ತು ದುಷ್ಕೃತ್ಯಗಳು) ನಮಗೆ ಹೇಗೆ ತಿಳಿದಿದೆ? ರಾಮನಿದ್ದ ಎಂದು ನಮಗೆ ಯಾರು ಹೇಳಿದರು? ನಮ್ಮ ಧರ್ಮ ಶಾಸ್ತ್ರಗಳಲ್ಲವೆ ಎಂದು ಹೇಳಿದ್ದಾರೆ.

ಈಗ ಈ ಸ್ಥಳವು ರಮಾನಂದ ಸಂಪ್ರದಾಯಸ್ಥರಿಗೆ ಮೀಸಲಾಗಿರುವುದರಿಂದ ಶಂಕರಾಚಾರ್ಯರ ಅಗತ್ಯವಿಲ್ಲ ಎಂದು ಚಂಪತ್ ರಾಯ್ ಹೇಳುತ್ತಿದ್ದಾರೆ. ಈಗ ಪ್ರಶ‍್ನೆ ಏನೆಂದರೆ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದಾದರೆ ಚಂಪತ್ ರಾಯ್ ಏಕೆ ಅಲ್ಲಿದ್ದಾರೆ? ನೃಪೇಂದ್ರ ಮಿಶ‍್ರಾ  ಏಕೆ ಅಲ್ಲಿದ್ದಾರೆ? ರಾಜಾ ಸಾಹೇಬ್ ಏಕೆ ಅಲ್ಲಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ. ಇವರೆಲ್ಲ ಪ್ರಾಣ ಪ್ರತಿಷ್ಠಾಪನೆ ನೆರವೇರುವುದಕ್ಕೂ ಮುನ್ನವೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಅವನ್ನು ರಮಾನಂದ ಸಂಪ್ರದಾಯಸ್ಥರಿಗೆ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಅವರು ದೇಣಿಗೆ ತೆಗೆದುಕೊಳ್ಳುವಾಗ ದೇವಾಲಯವು ರಮಾನಂದ ಸಂಪ್ರದಾಯಕ್ಕೆ ಸೇರಿದ್ದು ಎಂದು ಏಕೆ ಘೋಷಿಸಲಿಲ್ಲ? ಆ ಸಮಯದಲ್ಲಿ ನೀವು ದೇಶಾದ್ಯಂತ ಇರುವ ಸನಾತನ ಧರ್ಮಿಗಳಿಂದ ದೇಣಿಗೆ ತೆಗೆದುಕೊಂಡಿದ್ದೀರಿ. ನೀವು ನಮ್ಮಿಂದಲೂ ದೇಣಿಗೆ ತೆಗೆದುಕೊಂಡಿದ್ದೀರಿ. ದೇವಾಲಯವು ಶಂಕರಾಚಾರ್ಯರಿಗೆ ಸೇರದಿರುವಾಗ, ನೀವು ನಮ್ಮಿಂದ ದೇಣಿಗೆಯನ್ನು ಏಕೆ ಸ್ವೀಕರಿಸಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Here self respect is NIL in front of Rashtra Gaurav. No is complete in any respect. So we need not come to your mutt to see you. What’s your contribution in building Hindu Rashtra.
    Its shame on ones role who objects this Program.
    Jai Shree Ram

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...