Homeಮುಖಪುಟ'ಶಾಸ್ತ್ರ'ಗಳಿಗೆ ವಿರುದ್ಧವಾಗಿ 'ರಾಮಮಂದಿರ'ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

- Advertisement -
- Advertisement -

ರಾಮ ಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಹಾಗಾಗಿ ಪ್ರಾಣ ಪ್ರತಿಷ್ಠಾನ ‘ಶಾಸ್ತ್ರ’ಗಳಿಗೆ ವಿರುದ್ಧವಾದುದು ಎಂದು ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದ್ದು, ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ವಿಗ್ರಹ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಪುರಿಯ ಗೋವರ್ಧನ ಮಠದ ಮಠಾಧೀಶರು ವಿರೋಧ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ, ಉತ್ತರಾಖಂಡದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ದೇಶದ ಪ್ರಮುಖ ನಾಲ್ವರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ, ಈ ಸಮಾರಂಭವನ್ನು “ಶಾಸ್ತ್ರಗಳ ವಿರುದ್ಧ”  ಅಥವಾ ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ವಿಶೇಷವಾಗಿ ದೇವಾಲಯದ ನಿರ್ಮಾಣವು ಅಪೂರ್ಣವಾಗಿರುವ ವೇಳೆ ಪ್ರತಿಷ್ಠಾಪನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶಂಕರಾಚಾರ್ಯರು 4 ಮಠಗಳ ಪೈಕಿ ಒಂದು ಮಠದ ಮಠಾಧೀಶರಾಗಿದ್ದು, 8ನೆಯ ಶತಮಾನದಲ್ಲಿ ಹಿಂದೂ ಮಹರ್ಷಿ ಆದಿ ಶಂಕರ ಸ್ಥಾಪಿಸಿದ ಹಿಂದೂ ಅದ್ವೈತ ವೇದಾಂತ ಪರಂಪರೆಯ ಭಾಗವಾಗಿದ್ದಾರೆ. ಜ್ಯೋತಿರ್ಮಠ (ಜೋಶಿಮಠ),ಗೋವರ್ಧನ ಮಠ, ಶೃಂಗೇರಿ ಶಾರದಾ ಪೀಠ (ಕರ್ನಾಟಕ) ಹಾಗೂ ದ್ವಾರಕಾ ಶಾರದಾ ಪೀಠ (ಗುಜರಾತ್) ಎಂಬ ಮಠಗಳಿವೆ. ಆದಿ ಶಂಕರ ಮತ್ತು ಅವರ ಚಿಂತನೆಯ ಶೈವ ಪಂಥದಿಂದ ಪ್ರಭಾವಿತವಾಗಿದೆ. ಇದರಲ್ಲಿ ಶಿವನ ಆರಾಧನೆ, ಶಕ್ತಿಯ ಆರಾಧನೆ ಮಾಡುತ್ತಾರೆ.

ಜ್ಯೋತಿರ್ ಮಠದ 46ನೇ ಶಂಕರಾಚಾರ್ಯರಾದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ತಮ್ಮ ವೀಡಿಯೊದಲ್ಲಿ, ನಾಲ್ಕು ಶಂಕರಾಚಾರ್ಯರ ನಿರ್ಧಾರವನ್ನು “ಮೋದಿ ವಿರೋಧಿ” ಎಂದು ಅರ್ಥೈಸಬಾರದು ಆದರೆ ಅವರು “ಶಾಸ್ತ್ರ ವಿರೋಧಿ” ಆಗಲು ಬಯಸದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಾವು ಹೋಗದಿರಲು ಕಾರಣವೇನು? ಯಾವುದೇ ದ್ವೇಷದಿಂದಲ್ಲ, ಆದರೆ ಶಾಸ್ತ್ರ-ವಿಧಿಯನ್ನು ಅನುಸರಿಸುವುದು  ಶಂಕರಾಚಾರ್ಯರ ಕರ್ತವ್ಯವಾಗಿದೆ. ಇಲ್ಲಿ ಶಾಸ್ತ್ರ-ವಿಧಿಯನ್ನು ಕಡೆಗಣಿಸಲಾಗುತ್ತಿದೆ. ದೇವಾಲಯವು ಇನ್ನೂ ಅಪೂರ್ಣವಾಗಿರುವಾಗ ಪ್ರಾಣ ಪ್ರತಿಷ್ಠಾಪಣೆ ಮಾಡಬಾರದು. ನಾವು ಇದನ್ನು ಹೇಳಿದರೆ, ನಮ್ಮನ್ನು ‘ಮೋದಿ ವಿರೋಧಿ’ ಎಂದು ಕರೆಯಲಾಗುತ್ತದೆ. ಇಲ್ಲಿ ಮೋದಿ ವಿರೋಧಿ ಎಂದರೇನು? ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪ್ರಶ್ನಿಸಿದ್ದಾರೆ.

ಪುರಿಯ ಗೋವರ್ಧನ ಮಠದ ಮುಖ್ಯಸ್ಥ ನಿಶ್ಚಲಾನಂದ ಸರಸ್ವತಿ ಅವರು ತಮ್ಮ ಸ್ಥಾನದ ಘನತೆಯ ಬಗ್ಗೆ ಅರಿವು ಇರುವ ಕಾರಣ ಸಮಾರಂಭದಿಂದ ಹೊರಗುಳಿಯುವುದಾಗಿ ಘೋಷಿಸಿದ ಕೆಲವು ದಿನಗಳ ನಂತರ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ನಾನು ಅಲ್ಲಿ ಏನು ಮಾಡುತ್ತೇನೆ? ಮೋದಿ ರಾಮಮಂದಿರವನ್ನು ಉದ್ಘಾಟಿಸಿ, ವಿಗ್ರಹವನ್ನು ಸ್ಪರ್ಶಿಸಿದಾಗ ನಾನು ನಿಂತುಕೊಂಡು ಚಪ್ಪಾಳೆ ತಟ್ಟಲೆ? ನನಗೆ ಯಾವುದೇ ಸ್ಥಾನಮಾನ ಬೇಕಿಲ್ಲ. ನನಗೆ ಈಗಲೇ ದೊಡ್ಡ ಸ್ಥಾನವಿದೆ. ನನಗೆ ಯಾವುದೇ ಲಾಭ ಬೇಕಿಲ್ಲ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರು ಏನು ಮಾಡಬೇಕು? ಎಂದು ಅವರು ಪ್ರಶ‍್ನಿಸುತ್ತಿರುವ  ವಿಡಿಯೊವನ್ನು ನಾಗಾಲ್ಯಾಂಡ್ ಕಾಂಗ್ರೆಸ್ ಪೋಸ್ಟ್ ಮಾಡಿತ್ತು.

ವಿಡಿಯೋದಲ್ಲಿ ಅವರು, ಮೋದಿ ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಅಯೋಧ್ಯೆಯ ಬಗ್ಗೆ “ಯಾವುದೇ ದ್ವೇಷವಿಲ್ಲ”. ಇದು ಅಹಂಕಾರವಲ್ಲ. ಆದರೆ ನನ್ನ ಸ್ಥಾನದ ಘನತೆಯ ಬಗ್ಗೆ ನನಗೆ ಅರಿವಿದೆ, ಅದಕ್ಕಾಗಿಯೇ ನಾನು ಹೋಗುತ್ತಿಲ್ಲ. ನಾನು ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಬಹುದು ಎಂದು ಹೇಳುವ ಆಹ್ವಾನವನ್ನು ನಾನು ಸ್ವೀಕರಿಸಿದ್ದೇನೆ. ನಾನು ಒಬ್ಬ ವ್ಯಕ್ತಿಯನ್ನು ಏಕೆ ಕರೆದುಕೊಂಡು ಹೋಗಬೇಕು? ಎಂದು ಕೇಳಿದ್ದರು.

ವಿಶ‍್ವ ಹಿಂದೂ ಪರಿಷತ್‌ನ ಉಪಾಧ್ಯಕ್ಷ ಹಾಗೂ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಗಾಗಿ ರಚಿಸಲಾಗಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮಮಂದಿರ ವೈಷ್ಣವ ಪಂಥದ ರಮಾನಂದ ಸಂಪ್ರದಾಯಸ್ಥರಿಗೆ ಸೇರಿದೆ, ಸನ್ಯಾಸಿಗಳಿಗಾಗಲಿ, ಶೈವರಿಗಾಗಲಿ ಅಥವಾ ಶಾಕ್ತ ಪಂಥದವರಿಗಾಗಲಿ ಅಲ್ಲ ಎಂದು ‘ಅಮರ್ ಉಜಾಲ’ ಸುದ್ದಿ ಸಂಸ್ಥೆಗೆ ನೀಡಿದ್ದ ಸಂದರ್ಶನದಲ್ಲಿ  ಹೇಳಿಕೆ ನೀಡಿದ್ದರು.

ಅಪೂರ್ಣ ದೇವಾಲಯ

ಅವಿಮುಕ್ತೇಶ್ವರಾನಂದ ಸರಸ್ವತಿಯವರ ಪ್ರಕಾರ, ಪ್ರತಿಷ್ಠಾಪಣೆ ತುರ್ತಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಮಂದಿರ “ಸಂಪೂರ್ಣವಾಗಿ” ಪೂರ್ಣಗೊಳ್ಳುವವರೆಗೆ ಸರ್ಕಾರವು ಕಾಯಬಹುದಿತ್ತು. ಶಾಸ್ತ್ರಗಳ ವಿಷಯಕ್ಕೆ ಬಂದಾಗ ಇದು ದೊಡ್ಡ ತಪ್ಪಾಗಿದೆ. ನಾವು ಧರ್ಮ ಶಾಸ್ತ್ರಗಳ ಪ್ರಕಾರ ಕಾರ್ಯನಿರ್ವಹಿಸಲು ಬಯಸುತ್ತೇವೆ ಮತ್ತು ಜನರು ಅದೇ ರೀತಿ ಮಾಡಬೇಕೆಂದು ಬಯಸುತ್ತೇವೆ. ಏಕೆಂದರೆ ಪುಣ್ಯ-ಪಾಪ್ (ಒಳ್ಳೆಯ ಕಾರ್ಯಗಳು ಮತ್ತು ದುಷ್ಕೃತ್ಯಗಳು) ನಮಗೆ ಹೇಗೆ ತಿಳಿದಿದೆ? ರಾಮನಿದ್ದ ಎಂದು ನಮಗೆ ಯಾರು ಹೇಳಿದರು? ನಮ್ಮ ಧರ್ಮ ಶಾಸ್ತ್ರಗಳಲ್ಲವೆ ಎಂದು ಹೇಳಿದ್ದಾರೆ.

ಈಗ ಈ ಸ್ಥಳವು ರಮಾನಂದ ಸಂಪ್ರದಾಯಸ್ಥರಿಗೆ ಮೀಸಲಾಗಿರುವುದರಿಂದ ಶಂಕರಾಚಾರ್ಯರ ಅಗತ್ಯವಿಲ್ಲ ಎಂದು ಚಂಪತ್ ರಾಯ್ ಹೇಳುತ್ತಿದ್ದಾರೆ. ಈಗ ಪ್ರಶ‍್ನೆ ಏನೆಂದರೆ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದಾದರೆ ಚಂಪತ್ ರಾಯ್ ಏಕೆ ಅಲ್ಲಿದ್ದಾರೆ? ನೃಪೇಂದ್ರ ಮಿಶ‍್ರಾ  ಏಕೆ ಅಲ್ಲಿದ್ದಾರೆ? ರಾಜಾ ಸಾಹೇಬ್ ಏಕೆ ಅಲ್ಲಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ. ಇವರೆಲ್ಲ ಪ್ರಾಣ ಪ್ರತಿಷ್ಠಾಪನೆ ನೆರವೇರುವುದಕ್ಕೂ ಮುನ್ನವೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಅವನ್ನು ರಮಾನಂದ ಸಂಪ್ರದಾಯಸ್ಥರಿಗೆ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಅವರು ದೇಣಿಗೆ ತೆಗೆದುಕೊಳ್ಳುವಾಗ ದೇವಾಲಯವು ರಮಾನಂದ ಸಂಪ್ರದಾಯಕ್ಕೆ ಸೇರಿದ್ದು ಎಂದು ಏಕೆ ಘೋಷಿಸಲಿಲ್ಲ? ಆ ಸಮಯದಲ್ಲಿ ನೀವು ದೇಶಾದ್ಯಂತ ಇರುವ ಸನಾತನ ಧರ್ಮಿಗಳಿಂದ ದೇಣಿಗೆ ತೆಗೆದುಕೊಂಡಿದ್ದೀರಿ. ನೀವು ನಮ್ಮಿಂದಲೂ ದೇಣಿಗೆ ತೆಗೆದುಕೊಂಡಿದ್ದೀರಿ. ದೇವಾಲಯವು ಶಂಕರಾಚಾರ್ಯರಿಗೆ ಸೇರದಿರುವಾಗ, ನೀವು ನಮ್ಮಿಂದ ದೇಣಿಗೆಯನ್ನು ಏಕೆ ಸ್ವೀಕರಿಸಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Here self respect is NIL in front of Rashtra Gaurav. No is complete in any respect. So we need not come to your mutt to see you. What’s your contribution in building Hindu Rashtra.
    Its shame on ones role who objects this Program.
    Jai Shree Ram

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...