Homeಮುಖಪುಟ'ಶಾಸ್ತ್ರ'ಗಳಿಗೆ ವಿರುದ್ಧವಾಗಿ 'ರಾಮಮಂದಿರ'ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

- Advertisement -
- Advertisement -

ರಾಮ ಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಹಾಗಾಗಿ ಪ್ರಾಣ ಪ್ರತಿಷ್ಠಾನ ‘ಶಾಸ್ತ್ರ’ಗಳಿಗೆ ವಿರುದ್ಧವಾದುದು ಎಂದು ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದ್ದು, ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ವಿಗ್ರಹ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಪುರಿಯ ಗೋವರ್ಧನ ಮಠದ ಮಠಾಧೀಶರು ವಿರೋಧ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ, ಉತ್ತರಾಖಂಡದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ದೇಶದ ಪ್ರಮುಖ ನಾಲ್ವರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ, ಈ ಸಮಾರಂಭವನ್ನು “ಶಾಸ್ತ್ರಗಳ ವಿರುದ್ಧ”  ಅಥವಾ ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ವಿಶೇಷವಾಗಿ ದೇವಾಲಯದ ನಿರ್ಮಾಣವು ಅಪೂರ್ಣವಾಗಿರುವ ವೇಳೆ ಪ್ರತಿಷ್ಠಾಪನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶಂಕರಾಚಾರ್ಯರು 4 ಮಠಗಳ ಪೈಕಿ ಒಂದು ಮಠದ ಮಠಾಧೀಶರಾಗಿದ್ದು, 8ನೆಯ ಶತಮಾನದಲ್ಲಿ ಹಿಂದೂ ಮಹರ್ಷಿ ಆದಿ ಶಂಕರ ಸ್ಥಾಪಿಸಿದ ಹಿಂದೂ ಅದ್ವೈತ ವೇದಾಂತ ಪರಂಪರೆಯ ಭಾಗವಾಗಿದ್ದಾರೆ. ಜ್ಯೋತಿರ್ಮಠ (ಜೋಶಿಮಠ),ಗೋವರ್ಧನ ಮಠ, ಶೃಂಗೇರಿ ಶಾರದಾ ಪೀಠ (ಕರ್ನಾಟಕ) ಹಾಗೂ ದ್ವಾರಕಾ ಶಾರದಾ ಪೀಠ (ಗುಜರಾತ್) ಎಂಬ ಮಠಗಳಿವೆ. ಆದಿ ಶಂಕರ ಮತ್ತು ಅವರ ಚಿಂತನೆಯ ಶೈವ ಪಂಥದಿಂದ ಪ್ರಭಾವಿತವಾಗಿದೆ. ಇದರಲ್ಲಿ ಶಿವನ ಆರಾಧನೆ, ಶಕ್ತಿಯ ಆರಾಧನೆ ಮಾಡುತ್ತಾರೆ.

ಜ್ಯೋತಿರ್ ಮಠದ 46ನೇ ಶಂಕರಾಚಾರ್ಯರಾದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ತಮ್ಮ ವೀಡಿಯೊದಲ್ಲಿ, ನಾಲ್ಕು ಶಂಕರಾಚಾರ್ಯರ ನಿರ್ಧಾರವನ್ನು “ಮೋದಿ ವಿರೋಧಿ” ಎಂದು ಅರ್ಥೈಸಬಾರದು ಆದರೆ ಅವರು “ಶಾಸ್ತ್ರ ವಿರೋಧಿ” ಆಗಲು ಬಯಸದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಾವು ಹೋಗದಿರಲು ಕಾರಣವೇನು? ಯಾವುದೇ ದ್ವೇಷದಿಂದಲ್ಲ, ಆದರೆ ಶಾಸ್ತ್ರ-ವಿಧಿಯನ್ನು ಅನುಸರಿಸುವುದು  ಶಂಕರಾಚಾರ್ಯರ ಕರ್ತವ್ಯವಾಗಿದೆ. ಇಲ್ಲಿ ಶಾಸ್ತ್ರ-ವಿಧಿಯನ್ನು ಕಡೆಗಣಿಸಲಾಗುತ್ತಿದೆ. ದೇವಾಲಯವು ಇನ್ನೂ ಅಪೂರ್ಣವಾಗಿರುವಾಗ ಪ್ರಾಣ ಪ್ರತಿಷ್ಠಾಪಣೆ ಮಾಡಬಾರದು. ನಾವು ಇದನ್ನು ಹೇಳಿದರೆ, ನಮ್ಮನ್ನು ‘ಮೋದಿ ವಿರೋಧಿ’ ಎಂದು ಕರೆಯಲಾಗುತ್ತದೆ. ಇಲ್ಲಿ ಮೋದಿ ವಿರೋಧಿ ಎಂದರೇನು? ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪ್ರಶ್ನಿಸಿದ್ದಾರೆ.

ಪುರಿಯ ಗೋವರ್ಧನ ಮಠದ ಮುಖ್ಯಸ್ಥ ನಿಶ್ಚಲಾನಂದ ಸರಸ್ವತಿ ಅವರು ತಮ್ಮ ಸ್ಥಾನದ ಘನತೆಯ ಬಗ್ಗೆ ಅರಿವು ಇರುವ ಕಾರಣ ಸಮಾರಂಭದಿಂದ ಹೊರಗುಳಿಯುವುದಾಗಿ ಘೋಷಿಸಿದ ಕೆಲವು ದಿನಗಳ ನಂತರ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ನಾನು ಅಲ್ಲಿ ಏನು ಮಾಡುತ್ತೇನೆ? ಮೋದಿ ರಾಮಮಂದಿರವನ್ನು ಉದ್ಘಾಟಿಸಿ, ವಿಗ್ರಹವನ್ನು ಸ್ಪರ್ಶಿಸಿದಾಗ ನಾನು ನಿಂತುಕೊಂಡು ಚಪ್ಪಾಳೆ ತಟ್ಟಲೆ? ನನಗೆ ಯಾವುದೇ ಸ್ಥಾನಮಾನ ಬೇಕಿಲ್ಲ. ನನಗೆ ಈಗಲೇ ದೊಡ್ಡ ಸ್ಥಾನವಿದೆ. ನನಗೆ ಯಾವುದೇ ಲಾಭ ಬೇಕಿಲ್ಲ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರು ಏನು ಮಾಡಬೇಕು? ಎಂದು ಅವರು ಪ್ರಶ‍್ನಿಸುತ್ತಿರುವ  ವಿಡಿಯೊವನ್ನು ನಾಗಾಲ್ಯಾಂಡ್ ಕಾಂಗ್ರೆಸ್ ಪೋಸ್ಟ್ ಮಾಡಿತ್ತು.

ವಿಡಿಯೋದಲ್ಲಿ ಅವರು, ಮೋದಿ ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಅಯೋಧ್ಯೆಯ ಬಗ್ಗೆ “ಯಾವುದೇ ದ್ವೇಷವಿಲ್ಲ”. ಇದು ಅಹಂಕಾರವಲ್ಲ. ಆದರೆ ನನ್ನ ಸ್ಥಾನದ ಘನತೆಯ ಬಗ್ಗೆ ನನಗೆ ಅರಿವಿದೆ, ಅದಕ್ಕಾಗಿಯೇ ನಾನು ಹೋಗುತ್ತಿಲ್ಲ. ನಾನು ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಬಹುದು ಎಂದು ಹೇಳುವ ಆಹ್ವಾನವನ್ನು ನಾನು ಸ್ವೀಕರಿಸಿದ್ದೇನೆ. ನಾನು ಒಬ್ಬ ವ್ಯಕ್ತಿಯನ್ನು ಏಕೆ ಕರೆದುಕೊಂಡು ಹೋಗಬೇಕು? ಎಂದು ಕೇಳಿದ್ದರು.

ವಿಶ‍್ವ ಹಿಂದೂ ಪರಿಷತ್‌ನ ಉಪಾಧ್ಯಕ್ಷ ಹಾಗೂ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಗಾಗಿ ರಚಿಸಲಾಗಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮಮಂದಿರ ವೈಷ್ಣವ ಪಂಥದ ರಮಾನಂದ ಸಂಪ್ರದಾಯಸ್ಥರಿಗೆ ಸೇರಿದೆ, ಸನ್ಯಾಸಿಗಳಿಗಾಗಲಿ, ಶೈವರಿಗಾಗಲಿ ಅಥವಾ ಶಾಕ್ತ ಪಂಥದವರಿಗಾಗಲಿ ಅಲ್ಲ ಎಂದು ‘ಅಮರ್ ಉಜಾಲ’ ಸುದ್ದಿ ಸಂಸ್ಥೆಗೆ ನೀಡಿದ್ದ ಸಂದರ್ಶನದಲ್ಲಿ  ಹೇಳಿಕೆ ನೀಡಿದ್ದರು.

ಅಪೂರ್ಣ ದೇವಾಲಯ

ಅವಿಮುಕ್ತೇಶ್ವರಾನಂದ ಸರಸ್ವತಿಯವರ ಪ್ರಕಾರ, ಪ್ರತಿಷ್ಠಾಪಣೆ ತುರ್ತಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಮಂದಿರ “ಸಂಪೂರ್ಣವಾಗಿ” ಪೂರ್ಣಗೊಳ್ಳುವವರೆಗೆ ಸರ್ಕಾರವು ಕಾಯಬಹುದಿತ್ತು. ಶಾಸ್ತ್ರಗಳ ವಿಷಯಕ್ಕೆ ಬಂದಾಗ ಇದು ದೊಡ್ಡ ತಪ್ಪಾಗಿದೆ. ನಾವು ಧರ್ಮ ಶಾಸ್ತ್ರಗಳ ಪ್ರಕಾರ ಕಾರ್ಯನಿರ್ವಹಿಸಲು ಬಯಸುತ್ತೇವೆ ಮತ್ತು ಜನರು ಅದೇ ರೀತಿ ಮಾಡಬೇಕೆಂದು ಬಯಸುತ್ತೇವೆ. ಏಕೆಂದರೆ ಪುಣ್ಯ-ಪಾಪ್ (ಒಳ್ಳೆಯ ಕಾರ್ಯಗಳು ಮತ್ತು ದುಷ್ಕೃತ್ಯಗಳು) ನಮಗೆ ಹೇಗೆ ತಿಳಿದಿದೆ? ರಾಮನಿದ್ದ ಎಂದು ನಮಗೆ ಯಾರು ಹೇಳಿದರು? ನಮ್ಮ ಧರ್ಮ ಶಾಸ್ತ್ರಗಳಲ್ಲವೆ ಎಂದು ಹೇಳಿದ್ದಾರೆ.

ಈಗ ಈ ಸ್ಥಳವು ರಮಾನಂದ ಸಂಪ್ರದಾಯಸ್ಥರಿಗೆ ಮೀಸಲಾಗಿರುವುದರಿಂದ ಶಂಕರಾಚಾರ್ಯರ ಅಗತ್ಯವಿಲ್ಲ ಎಂದು ಚಂಪತ್ ರಾಯ್ ಹೇಳುತ್ತಿದ್ದಾರೆ. ಈಗ ಪ್ರಶ‍್ನೆ ಏನೆಂದರೆ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದಾದರೆ ಚಂಪತ್ ರಾಯ್ ಏಕೆ ಅಲ್ಲಿದ್ದಾರೆ? ನೃಪೇಂದ್ರ ಮಿಶ‍್ರಾ  ಏಕೆ ಅಲ್ಲಿದ್ದಾರೆ? ರಾಜಾ ಸಾಹೇಬ್ ಏಕೆ ಅಲ್ಲಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ. ಇವರೆಲ್ಲ ಪ್ರಾಣ ಪ್ರತಿಷ್ಠಾಪನೆ ನೆರವೇರುವುದಕ್ಕೂ ಮುನ್ನವೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಅವನ್ನು ರಮಾನಂದ ಸಂಪ್ರದಾಯಸ್ಥರಿಗೆ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಅವರು ದೇಣಿಗೆ ತೆಗೆದುಕೊಳ್ಳುವಾಗ ದೇವಾಲಯವು ರಮಾನಂದ ಸಂಪ್ರದಾಯಕ್ಕೆ ಸೇರಿದ್ದು ಎಂದು ಏಕೆ ಘೋಷಿಸಲಿಲ್ಲ? ಆ ಸಮಯದಲ್ಲಿ ನೀವು ದೇಶಾದ್ಯಂತ ಇರುವ ಸನಾತನ ಧರ್ಮಿಗಳಿಂದ ದೇಣಿಗೆ ತೆಗೆದುಕೊಂಡಿದ್ದೀರಿ. ನೀವು ನಮ್ಮಿಂದಲೂ ದೇಣಿಗೆ ತೆಗೆದುಕೊಂಡಿದ್ದೀರಿ. ದೇವಾಲಯವು ಶಂಕರಾಚಾರ್ಯರಿಗೆ ಸೇರದಿರುವಾಗ, ನೀವು ನಮ್ಮಿಂದ ದೇಣಿಗೆಯನ್ನು ಏಕೆ ಸ್ವೀಕರಿಸಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Here self respect is NIL in front of Rashtra Gaurav. No is complete in any respect. So we need not come to your mutt to see you. What’s your contribution in building Hindu Rashtra.
    Its shame on ones role who objects this Program.
    Jai Shree Ram

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...