Homeಮುಖಪುಟ'ಶಾಸ್ತ್ರ'ಗಳಿಗೆ ವಿರುದ್ಧವಾಗಿ 'ರಾಮಮಂದಿರ'ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

- Advertisement -
- Advertisement -

ರಾಮ ಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಹಾಗಾಗಿ ಪ್ರಾಣ ಪ್ರತಿಷ್ಠಾನ ‘ಶಾಸ್ತ್ರ’ಗಳಿಗೆ ವಿರುದ್ಧವಾದುದು ಎಂದು ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದ್ದು, ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ವಿಗ್ರಹ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಪುರಿಯ ಗೋವರ್ಧನ ಮಠದ ಮಠಾಧೀಶರು ವಿರೋಧ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ, ಉತ್ತರಾಖಂಡದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ದೇಶದ ಪ್ರಮುಖ ನಾಲ್ವರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜ್ಯೋತಿರ್ ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ, ಈ ಸಮಾರಂಭವನ್ನು “ಶಾಸ್ತ್ರಗಳ ವಿರುದ್ಧ”  ಅಥವಾ ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ವಿಶೇಷವಾಗಿ ದೇವಾಲಯದ ನಿರ್ಮಾಣವು ಅಪೂರ್ಣವಾಗಿರುವ ವೇಳೆ ಪ್ರತಿಷ್ಠಾಪನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶಂಕರಾಚಾರ್ಯರು 4 ಮಠಗಳ ಪೈಕಿ ಒಂದು ಮಠದ ಮಠಾಧೀಶರಾಗಿದ್ದು, 8ನೆಯ ಶತಮಾನದಲ್ಲಿ ಹಿಂದೂ ಮಹರ್ಷಿ ಆದಿ ಶಂಕರ ಸ್ಥಾಪಿಸಿದ ಹಿಂದೂ ಅದ್ವೈತ ವೇದಾಂತ ಪರಂಪರೆಯ ಭಾಗವಾಗಿದ್ದಾರೆ. ಜ್ಯೋತಿರ್ಮಠ (ಜೋಶಿಮಠ),ಗೋವರ್ಧನ ಮಠ, ಶೃಂಗೇರಿ ಶಾರದಾ ಪೀಠ (ಕರ್ನಾಟಕ) ಹಾಗೂ ದ್ವಾರಕಾ ಶಾರದಾ ಪೀಠ (ಗುಜರಾತ್) ಎಂಬ ಮಠಗಳಿವೆ. ಆದಿ ಶಂಕರ ಮತ್ತು ಅವರ ಚಿಂತನೆಯ ಶೈವ ಪಂಥದಿಂದ ಪ್ರಭಾವಿತವಾಗಿದೆ. ಇದರಲ್ಲಿ ಶಿವನ ಆರಾಧನೆ, ಶಕ್ತಿಯ ಆರಾಧನೆ ಮಾಡುತ್ತಾರೆ.

ಜ್ಯೋತಿರ್ ಮಠದ 46ನೇ ಶಂಕರಾಚಾರ್ಯರಾದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ತಮ್ಮ ವೀಡಿಯೊದಲ್ಲಿ, ನಾಲ್ಕು ಶಂಕರಾಚಾರ್ಯರ ನಿರ್ಧಾರವನ್ನು “ಮೋದಿ ವಿರೋಧಿ” ಎಂದು ಅರ್ಥೈಸಬಾರದು ಆದರೆ ಅವರು “ಶಾಸ್ತ್ರ ವಿರೋಧಿ” ಆಗಲು ಬಯಸದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಾವು ಹೋಗದಿರಲು ಕಾರಣವೇನು? ಯಾವುದೇ ದ್ವೇಷದಿಂದಲ್ಲ, ಆದರೆ ಶಾಸ್ತ್ರ-ವಿಧಿಯನ್ನು ಅನುಸರಿಸುವುದು  ಶಂಕರಾಚಾರ್ಯರ ಕರ್ತವ್ಯವಾಗಿದೆ. ಇಲ್ಲಿ ಶಾಸ್ತ್ರ-ವಿಧಿಯನ್ನು ಕಡೆಗಣಿಸಲಾಗುತ್ತಿದೆ. ದೇವಾಲಯವು ಇನ್ನೂ ಅಪೂರ್ಣವಾಗಿರುವಾಗ ಪ್ರಾಣ ಪ್ರತಿಷ್ಠಾಪಣೆ ಮಾಡಬಾರದು. ನಾವು ಇದನ್ನು ಹೇಳಿದರೆ, ನಮ್ಮನ್ನು ‘ಮೋದಿ ವಿರೋಧಿ’ ಎಂದು ಕರೆಯಲಾಗುತ್ತದೆ. ಇಲ್ಲಿ ಮೋದಿ ವಿರೋಧಿ ಎಂದರೇನು? ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪ್ರಶ್ನಿಸಿದ್ದಾರೆ.

ಪುರಿಯ ಗೋವರ್ಧನ ಮಠದ ಮುಖ್ಯಸ್ಥ ನಿಶ್ಚಲಾನಂದ ಸರಸ್ವತಿ ಅವರು ತಮ್ಮ ಸ್ಥಾನದ ಘನತೆಯ ಬಗ್ಗೆ ಅರಿವು ಇರುವ ಕಾರಣ ಸಮಾರಂಭದಿಂದ ಹೊರಗುಳಿಯುವುದಾಗಿ ಘೋಷಿಸಿದ ಕೆಲವು ದಿನಗಳ ನಂತರ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ನಾನು ಅಲ್ಲಿ ಏನು ಮಾಡುತ್ತೇನೆ? ಮೋದಿ ರಾಮಮಂದಿರವನ್ನು ಉದ್ಘಾಟಿಸಿ, ವಿಗ್ರಹವನ್ನು ಸ್ಪರ್ಶಿಸಿದಾಗ ನಾನು ನಿಂತುಕೊಂಡು ಚಪ್ಪಾಳೆ ತಟ್ಟಲೆ? ನನಗೆ ಯಾವುದೇ ಸ್ಥಾನಮಾನ ಬೇಕಿಲ್ಲ. ನನಗೆ ಈಗಲೇ ದೊಡ್ಡ ಸ್ಥಾನವಿದೆ. ನನಗೆ ಯಾವುದೇ ಲಾಭ ಬೇಕಿಲ್ಲ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರು ಏನು ಮಾಡಬೇಕು? ಎಂದು ಅವರು ಪ್ರಶ‍್ನಿಸುತ್ತಿರುವ  ವಿಡಿಯೊವನ್ನು ನಾಗಾಲ್ಯಾಂಡ್ ಕಾಂಗ್ರೆಸ್ ಪೋಸ್ಟ್ ಮಾಡಿತ್ತು.

ವಿಡಿಯೋದಲ್ಲಿ ಅವರು, ಮೋದಿ ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಅಯೋಧ್ಯೆಯ ಬಗ್ಗೆ “ಯಾವುದೇ ದ್ವೇಷವಿಲ್ಲ”. ಇದು ಅಹಂಕಾರವಲ್ಲ. ಆದರೆ ನನ್ನ ಸ್ಥಾನದ ಘನತೆಯ ಬಗ್ಗೆ ನನಗೆ ಅರಿವಿದೆ, ಅದಕ್ಕಾಗಿಯೇ ನಾನು ಹೋಗುತ್ತಿಲ್ಲ. ನಾನು ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಬಹುದು ಎಂದು ಹೇಳುವ ಆಹ್ವಾನವನ್ನು ನಾನು ಸ್ವೀಕರಿಸಿದ್ದೇನೆ. ನಾನು ಒಬ್ಬ ವ್ಯಕ್ತಿಯನ್ನು ಏಕೆ ಕರೆದುಕೊಂಡು ಹೋಗಬೇಕು? ಎಂದು ಕೇಳಿದ್ದರು.

ವಿಶ‍್ವ ಹಿಂದೂ ಪರಿಷತ್‌ನ ಉಪಾಧ್ಯಕ್ಷ ಹಾಗೂ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಗಾಗಿ ರಚಿಸಲಾಗಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮಮಂದಿರ ವೈಷ್ಣವ ಪಂಥದ ರಮಾನಂದ ಸಂಪ್ರದಾಯಸ್ಥರಿಗೆ ಸೇರಿದೆ, ಸನ್ಯಾಸಿಗಳಿಗಾಗಲಿ, ಶೈವರಿಗಾಗಲಿ ಅಥವಾ ಶಾಕ್ತ ಪಂಥದವರಿಗಾಗಲಿ ಅಲ್ಲ ಎಂದು ‘ಅಮರ್ ಉಜಾಲ’ ಸುದ್ದಿ ಸಂಸ್ಥೆಗೆ ನೀಡಿದ್ದ ಸಂದರ್ಶನದಲ್ಲಿ  ಹೇಳಿಕೆ ನೀಡಿದ್ದರು.

ಅಪೂರ್ಣ ದೇವಾಲಯ

ಅವಿಮುಕ್ತೇಶ್ವರಾನಂದ ಸರಸ್ವತಿಯವರ ಪ್ರಕಾರ, ಪ್ರತಿಷ್ಠಾಪಣೆ ತುರ್ತಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಮಂದಿರ “ಸಂಪೂರ್ಣವಾಗಿ” ಪೂರ್ಣಗೊಳ್ಳುವವರೆಗೆ ಸರ್ಕಾರವು ಕಾಯಬಹುದಿತ್ತು. ಶಾಸ್ತ್ರಗಳ ವಿಷಯಕ್ಕೆ ಬಂದಾಗ ಇದು ದೊಡ್ಡ ತಪ್ಪಾಗಿದೆ. ನಾವು ಧರ್ಮ ಶಾಸ್ತ್ರಗಳ ಪ್ರಕಾರ ಕಾರ್ಯನಿರ್ವಹಿಸಲು ಬಯಸುತ್ತೇವೆ ಮತ್ತು ಜನರು ಅದೇ ರೀತಿ ಮಾಡಬೇಕೆಂದು ಬಯಸುತ್ತೇವೆ. ಏಕೆಂದರೆ ಪುಣ್ಯ-ಪಾಪ್ (ಒಳ್ಳೆಯ ಕಾರ್ಯಗಳು ಮತ್ತು ದುಷ್ಕೃತ್ಯಗಳು) ನಮಗೆ ಹೇಗೆ ತಿಳಿದಿದೆ? ರಾಮನಿದ್ದ ಎಂದು ನಮಗೆ ಯಾರು ಹೇಳಿದರು? ನಮ್ಮ ಧರ್ಮ ಶಾಸ್ತ್ರಗಳಲ್ಲವೆ ಎಂದು ಹೇಳಿದ್ದಾರೆ.

ಈಗ ಈ ಸ್ಥಳವು ರಮಾನಂದ ಸಂಪ್ರದಾಯಸ್ಥರಿಗೆ ಮೀಸಲಾಗಿರುವುದರಿಂದ ಶಂಕರಾಚಾರ್ಯರ ಅಗತ್ಯವಿಲ್ಲ ಎಂದು ಚಂಪತ್ ರಾಯ್ ಹೇಳುತ್ತಿದ್ದಾರೆ. ಈಗ ಪ್ರಶ‍್ನೆ ಏನೆಂದರೆ ರಾಮಮಂದಿರವು ರಮಾನಂದ ಪಂಥಕ್ಕೆ ಸೇರಿದ್ದಾದರೆ ಚಂಪತ್ ರಾಯ್ ಏಕೆ ಅಲ್ಲಿದ್ದಾರೆ? ನೃಪೇಂದ್ರ ಮಿಶ‍್ರಾ  ಏಕೆ ಅಲ್ಲಿದ್ದಾರೆ? ರಾಜಾ ಸಾಹೇಬ್ ಏಕೆ ಅಲ್ಲಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ. ಇವರೆಲ್ಲ ಪ್ರಾಣ ಪ್ರತಿಷ್ಠಾಪನೆ ನೆರವೇರುವುದಕ್ಕೂ ಮುನ್ನವೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಅವನ್ನು ರಮಾನಂದ ಸಂಪ್ರದಾಯಸ್ಥರಿಗೆ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಅವರು ದೇಣಿಗೆ ತೆಗೆದುಕೊಳ್ಳುವಾಗ ದೇವಾಲಯವು ರಮಾನಂದ ಸಂಪ್ರದಾಯಕ್ಕೆ ಸೇರಿದ್ದು ಎಂದು ಏಕೆ ಘೋಷಿಸಲಿಲ್ಲ? ಆ ಸಮಯದಲ್ಲಿ ನೀವು ದೇಶಾದ್ಯಂತ ಇರುವ ಸನಾತನ ಧರ್ಮಿಗಳಿಂದ ದೇಣಿಗೆ ತೆಗೆದುಕೊಂಡಿದ್ದೀರಿ. ನೀವು ನಮ್ಮಿಂದಲೂ ದೇಣಿಗೆ ತೆಗೆದುಕೊಂಡಿದ್ದೀರಿ. ದೇವಾಲಯವು ಶಂಕರಾಚಾರ್ಯರಿಗೆ ಸೇರದಿರುವಾಗ, ನೀವು ನಮ್ಮಿಂದ ದೇಣಿಗೆಯನ್ನು ಏಕೆ ಸ್ವೀಕರಿಸಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Here self respect is NIL in front of Rashtra Gaurav. No is complete in any respect. So we need not come to your mutt to see you. What’s your contribution in building Hindu Rashtra.
    Its shame on ones role who objects this Program.
    Jai Shree Ram

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...