Homeಅಂತರಾಷ್ಟ್ರೀಯವಿಶ್ವ ಸಂತೋಷ ವರದಿ- 149 ದೇಶಗಳಲ್ಲಿ ಭಾರತಕ್ಕೆ 139 ಸ್ಥಾನ!

ವಿಶ್ವ ಸಂತೋಷ ವರದಿ- 149 ದೇಶಗಳಲ್ಲಿ ಭಾರತಕ್ಕೆ 139 ಸ್ಥಾನ!

ಪಾಕಿಸ್ತಾನ 105 ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 101 ನೇ ಸ್ಥಾನದಲ್ಲಿದೆ ಮತ್ತು ಚೀನಾ 84 ನೇ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಶುಕ್ರವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ‘ವಿಶ್ವ ಹ್ಯಾಪಿನೆಸ್‌ ರಿಪೋರ್ಟ್-2021’ ರ ಪಟ್ಟಿಯಲ್ಲಿ ಭಾರತವು 149 ದೇಶಗಳಲ್ಲಿ 139 ನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಫಿನ್ಲೆಂಡ್ ಅಗ್ರಸ್ಥಾನದಲ್ಲಿದೆ.

ವಿಶ್ವಸಂಸ್ಥೆಯ ಸಸ್ಟೈನಬಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್ ನೆಟ್ವರ್ಕ್ ಹೊರಡಿಸಿದ ‘ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್-2021’ ವರದಿಯು, ಕೊರೊನಾ ಸಂಕ್ರಾಮಿಕವು ಪ್ರಪಂಚದಾದ್ಯಂತದ ಜನರ ಹೇಗೆ ಪರಿಣಾಮ ಬೀರಿದೆ ಎಂಬುದರ ಮೇಲೆ ಕೇಂದ್ರೀಕರಿಸಿದೆ.

ವಿಶ್ವದ 149 ದೇಶಗಳ ನಾಗರಿಕರು ತಾವು ಎಷ್ಟು ಸಂತೋಷದಿಂದ ಇದ್ದೇವೆ ಎಂದು ಹೇಳಿರುವುದರ ಮೇಲೆ ದೇಶಗಳು ವರದಿಯಲ್ಲಿ ತಮ್ಮ ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

“ನಮ್ಮ ಗುರಿಯು ಎರಡು ಉದ್ದೇಶಗಳನ್ನು ಹೊಂದಿದ್ದು, ಮೊದಲನೆಯದಾಗಿ ಜನರ ಜೀವನದ ಸಂರಚನೆ ಮತ್ತು ಗುಣಮಟ್ಟದ ಮೇಲೆ ಸಾಂಕ್ರಾಮಿಕದ ಪರಿಣಾಮಗಳನ್ನು ಕೇಂದ್ರೀಕರಿಸುವುದು. ಎರಡನೆಯದಾಗಿ ಸಾಂಕ್ರಾಮಿಕವನ್ನು ಪ್ರಪಂಚದಾದ್ಯಂತದ ಸರ್ಕಾರಗಳು ಹೇಗೆ ಎದುರಿಸಿದೆ ಎಂಬುದನ್ನು ವಿವರಿಸಲು ಮತ್ತು ಮೌಲ್ಯಮಾಪನ ಮಾಡುವುದಾಗಿದೆ. ನಿರ್ದಿಷ್ಟವಾಗಿ, ಕೆಲವು ದೇಶಗಳು ಇತರ ದೇಶಗಳಿಗಿಂತ ಯಾಕೆ ಉತ್ತಮವಾಗಿ ಕಾರ್ಯನಿರ್ವಹಿಸಿವೆ ಎಂಬುದನ್ನು ವಿವರಿಸುವುದು ನಮ್ಮ ಉದ್ದೇಶವಾಗಿದೆ” ಎಂದು ವರದಿಯು ಹೇಳಿಕೆಯಲ್ಲಿ ತಿಳಿಸಿದೆ.

ಈ ಪಟ್ಟಿಯಲ್ಲಿ ಭಾರತವು 139 ನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ. ವಿಶ್ವಸಂಸ್ಥೆಯು 2019 ರಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಭಾರತವು 140 ನೇ ಸ್ಥಾನದಲ್ಲಿತ್ತು.

ವರದಿಯಲ್ಲಿ ಫಿನ್‌ಲ್ಯಾಂಡ್ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವೆಂದು ಸ್ಥಾನ ಪಡೆದಿದೆ. ನಾರ್ಡಿಕ್ ದೇಶಗಳಾದ ಐಸ್‌ಲ್ಯಾಂಡ್, ಡೆನ್ಮಾರ್ಕ್, ಸ್ವಿಟ್‌ಜಲ್ಯಾಂಡ್, ನೆದರ್ಲ್ಯಾಂಡ್ಸ್, ಸ್ವೀಡನ್, ಜರ್ಮನಿ ಮತ್ತು ನಾರ್ವೆಯು ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: ರಣಥಂಬೂರ್‌‌ ಟೈಗರ್‌ ರಿಸರ್ವ್‌ನಲ್ಲಿ ನಾಲ್ಕು ಹುಲಿಗಳು ಒಂದು ವರ್ಷದಿಂದ ನಾಪತ್ತೆ

ಪಾಕಿಸ್ತಾನ 105 ನೇ ಸ್ಥಾನದಲ್ಲಿ, ಬಾಂಗ್ಲಾದೇಶ 101 ನೇ ಸ್ಥಾನದಲ್ಲಿದೆ ಮತ್ತು ಚೀನಾ 84 ನೇ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುದ್ಧ ಪೀಡಿತ ಅಫ್ಘಾನಿಸ್ತಾನದ ಜನರು ತಮ್ಮ ಜೀವನದ ಬಗ್ಗೆ ಹೆಚ್ಚು ಅತೃಪ್ತರಾಗಿದ್ದಾರೆ, ನಂತರದ ಸ್ಥಾನಗಳಲ್ಲಿ ಜಿಂಬಾಬ್ವೆ (148), ರುವಾಂಡಾ (147), ಬೋಟ್ಸ್ವಾನ (146) ಮತ್ತು ಲೆಸೊಥೊ (145) ದೇಶಗಳಿವೆ.

ಈ ವರದಿಯ ಫಲಿತಾಂಶಗಳು ಜಿಡಿಪಿ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ಇತರ ಅಂಶಗಳೊಂದಿಗೆ ಪರಸ್ಪರ ಸಂಬಂಧ ಹೊಂದಿವೆ ಎಂದು ರಿಪೋರ್ಟ್ ತಿಳಿಸಿದೆ.

ವಿಶ್ವದ ಅತ್ಯಂತ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾಗಿದ್ದರೂ ಅಮೆರಿಕವು ಈ ಪಟ್ಟಿಯಲ್ಲಿ 19 ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...