Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...