Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...