Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...