Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....