Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...