Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...