Homeಮುಖಪುಟ'ವಿಶ್ವ ಪತ್ರಿಕಾ ಸ್ವಾತಂತ್ರ್ಯ' ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

- Advertisement -
- Advertisement -

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು.

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ.

ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ ‘ಅತ್ಯಂತ ಗಂಭೀರ’ ಪರಿಸ್ಥಿತಿಯಲ್ಲಿಯೇ ಇದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025 Source: Reporters Without Borders

“ರಾಜಕೀಯ ಪ್ರಭಾವಿಗಳ ಕೈಯಲ್ಲಿ ಮಾಧ್ಯಮಗಳ ಮಾಲೀಕತ್ವದ ಕೇಂದ್ರೀಕರಣವು ಮಾಧ್ಯಮ ಬಹುತ್ವಕ್ಕೆ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಸೇರಿದೆ” ಎಂದು ವರದಿ ತಿಳಿಸಿದೆ.

ಅದಲ್ಲದೆ, ವರದಿಯು ಜಾಗತಿಕ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿಯನ್ನು ಮೊದಲ ಬಾರಿಗೆ ‘ಕಠಿಣ ಪರಿಸ್ಥಿತಿ’ಯಲ್ಲಿದೆ ಎಂದಿದೆ. ಮಾಧ್ಯಮ ದುರ್ಬಲಗೊಳ್ಳಲು ಕಾರಣವಾದ ಪ್ರಮುಖ ಅಂಶವೆಂದರೆ ‘ಆರ್ಥಿಕ ಒತ್ತಡ’ ಎಂದು ಹೇಳಿದೆ.

ಸೂಚ್ಯಂಕದಲ್ಲಿ ನೆರೆಯ ರಾಷ್ಟ್ರಗಳಲ್ಲಿ ನೇಪಾಳ (90ನೇ ಸ್ಥಾನ), ಮಾಲ್ಡೀವ್ಸ್ (104ನೇ ಸ್ಥಾನ), ಶ್ರೀಲಂಕಾ (139ನೇ ಸ್ಥಾನ), ಬಾಂಗ್ಲಾದೇಶ (149ನೇ ಸ್ಥಾನ)ಕ್ಕಿಂತ ಭಾರತ ಹಿಂದೆ ಇದ್ದರೆ, ಭೂತಾನ್ (152ನೇ ಸ್ಥಾನ), ಪಾಕಿಸ್ತಾನ (158ನೇ ಸ್ಥಾನ), ಮ್ಯಾನ್ಮಾರ್ (169 ನೇ ಸ್ಥಾನ), ಅಫ್ಘಾನಿಸ್ತಾನ (175ನೇ ಸ್ಥಾನ) ಮತ್ತು ಚೀನಾ (178ನೇ ಸ್ಥಾನ) ಕ್ಕಿಂತ ಉತ್ತಮ ಸ್ಥಾನದಲ್ಲಿದೆ.

ನಾರ್ವೆ, ಎಸ್ಟೋನಿಯಾ ಮತ್ತು ನೆದರ್‌ಲ್ಯಾಂಡ್ಸ್ ಮೊದಲ ಮೂರು ಸ್ಥಾನಗಳನ್ನು ಪಡೆದಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಮತ್ತು ಭದ್ರತೆ ಎಂಬ ಐದು ಅಂಶಗಳ ಆಧಾರದ ಮೇಲೆ ದೇಶಗಳಲ್ಲಿನ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡುತ್ತದೆ.

‘ಆರ್ಥಿಕ ಸ್ವಾತಂತ್ರ್ಯವಿಲ್ಲದೆ ಪತ್ರಿಕಾ ಸ್ವಾತಂತ್ರ್ಯವಿಲ್ಲ’ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ ಸಂಪಾದಕೀಯ ನಿರ್ದೇಶಕಿ ಆನ್ ಬೊಕಾಂಡೆ ಹೇಳಿದ್ದಾರೆ.

“ಸುದ್ದಿ ಮಾಧ್ಯಮಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ, ಗುಣಮಟ್ಟದ ವರದಿಗಾರಿಕೆಯನ್ನು ಕಡೆಗಣಿಸಿ ಪ್ರೇಕ್ಷಕರನ್ನು ಆಕರ್ಷಿಸುವ ಸ್ಪರ್ಧೆಗೆ ಇಳಿಯುತ್ತವೆ ಮತ್ತು ಅವರನ್ನು ಶೋಷಿಸಲು ಪ್ರಯತ್ನಿಸುವ ಬಂಡವಾಳಶಾಹಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ಬಲಿಯಾಗಬಹುದು”ಎಂದಿದ್ದಾರೆ.

“ಪತ್ರಿಕೋದ್ಯಮಕ್ಕೆ ಅನುಕೂಲಕರವಾದ ಮತ್ತು ಅಂತರ್ಗತವಾಗಿ ದುಬಾರಿಯಾಗಿರುವ ವಿಶ್ವಾಸಾರ್ಹ ಮಾಹಿತಿಯ ಉತ್ಪಾದನೆಯನ್ನು ಖಾತ್ರಿಪಡಿಸುವ ಸ್ಥಿತಿಗೆ ಮಾಧ್ಯಮ ಆರ್ಥಿಕತೆಯನ್ನು ತುರ್ತಾಗಿ ಪುನಃಸ್ಥಾಪಿಸಬೇಕು. ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ಉಚಿತ, ವಿಶ್ವಾಸಾರ್ಹ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮಾಧ್ಯಮದ ಆರ್ಥಿಕ ಸ್ವಾತಂತ್ರ್ಯವು ಅಗತ್ಯವಾಗಿದೆ” ಎಂದು ಆನ್ ಬೊಕಾಂಡೆ ಹೇಳಿದ್ದಾರೆ.

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...