Homeಮುಖಪುಟ'ವಿಶ್ವ ಪತ್ರಿಕಾ ಸ್ವಾತಂತ್ರ್ಯ' ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

- Advertisement -
- Advertisement -

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು.

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ.

ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ ‘ಅತ್ಯಂತ ಗಂಭೀರ’ ಪರಿಸ್ಥಿತಿಯಲ್ಲಿಯೇ ಇದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025 Source: Reporters Without Borders

“ರಾಜಕೀಯ ಪ್ರಭಾವಿಗಳ ಕೈಯಲ್ಲಿ ಮಾಧ್ಯಮಗಳ ಮಾಲೀಕತ್ವದ ಕೇಂದ್ರೀಕರಣವು ಮಾಧ್ಯಮ ಬಹುತ್ವಕ್ಕೆ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಸೇರಿದೆ” ಎಂದು ವರದಿ ತಿಳಿಸಿದೆ.

ಅದಲ್ಲದೆ, ವರದಿಯು ಜಾಗತಿಕ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿಯನ್ನು ಮೊದಲ ಬಾರಿಗೆ ‘ಕಠಿಣ ಪರಿಸ್ಥಿತಿ’ಯಲ್ಲಿದೆ ಎಂದಿದೆ. ಮಾಧ್ಯಮ ದುರ್ಬಲಗೊಳ್ಳಲು ಕಾರಣವಾದ ಪ್ರಮುಖ ಅಂಶವೆಂದರೆ ‘ಆರ್ಥಿಕ ಒತ್ತಡ’ ಎಂದು ಹೇಳಿದೆ.

ಸೂಚ್ಯಂಕದಲ್ಲಿ ನೆರೆಯ ರಾಷ್ಟ್ರಗಳಲ್ಲಿ ನೇಪಾಳ (90ನೇ ಸ್ಥಾನ), ಮಾಲ್ಡೀವ್ಸ್ (104ನೇ ಸ್ಥಾನ), ಶ್ರೀಲಂಕಾ (139ನೇ ಸ್ಥಾನ), ಬಾಂಗ್ಲಾದೇಶ (149ನೇ ಸ್ಥಾನ)ಕ್ಕಿಂತ ಭಾರತ ಹಿಂದೆ ಇದ್ದರೆ, ಭೂತಾನ್ (152ನೇ ಸ್ಥಾನ), ಪಾಕಿಸ್ತಾನ (158ನೇ ಸ್ಥಾನ), ಮ್ಯಾನ್ಮಾರ್ (169 ನೇ ಸ್ಥಾನ), ಅಫ್ಘಾನಿಸ್ತಾನ (175ನೇ ಸ್ಥಾನ) ಮತ್ತು ಚೀನಾ (178ನೇ ಸ್ಥಾನ) ಕ್ಕಿಂತ ಉತ್ತಮ ಸ್ಥಾನದಲ್ಲಿದೆ.

ನಾರ್ವೆ, ಎಸ್ಟೋನಿಯಾ ಮತ್ತು ನೆದರ್‌ಲ್ಯಾಂಡ್ಸ್ ಮೊದಲ ಮೂರು ಸ್ಥಾನಗಳನ್ನು ಪಡೆದಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಮತ್ತು ಭದ್ರತೆ ಎಂಬ ಐದು ಅಂಶಗಳ ಆಧಾರದ ಮೇಲೆ ದೇಶಗಳಲ್ಲಿನ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡುತ್ತದೆ.

‘ಆರ್ಥಿಕ ಸ್ವಾತಂತ್ರ್ಯವಿಲ್ಲದೆ ಪತ್ರಿಕಾ ಸ್ವಾತಂತ್ರ್ಯವಿಲ್ಲ’ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ ಸಂಪಾದಕೀಯ ನಿರ್ದೇಶಕಿ ಆನ್ ಬೊಕಾಂಡೆ ಹೇಳಿದ್ದಾರೆ.

“ಸುದ್ದಿ ಮಾಧ್ಯಮಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ, ಗುಣಮಟ್ಟದ ವರದಿಗಾರಿಕೆಯನ್ನು ಕಡೆಗಣಿಸಿ ಪ್ರೇಕ್ಷಕರನ್ನು ಆಕರ್ಷಿಸುವ ಸ್ಪರ್ಧೆಗೆ ಇಳಿಯುತ್ತವೆ ಮತ್ತು ಅವರನ್ನು ಶೋಷಿಸಲು ಪ್ರಯತ್ನಿಸುವ ಬಂಡವಾಳಶಾಹಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ಬಲಿಯಾಗಬಹುದು”ಎಂದಿದ್ದಾರೆ.

“ಪತ್ರಿಕೋದ್ಯಮಕ್ಕೆ ಅನುಕೂಲಕರವಾದ ಮತ್ತು ಅಂತರ್ಗತವಾಗಿ ದುಬಾರಿಯಾಗಿರುವ ವಿಶ್ವಾಸಾರ್ಹ ಮಾಹಿತಿಯ ಉತ್ಪಾದನೆಯನ್ನು ಖಾತ್ರಿಪಡಿಸುವ ಸ್ಥಿತಿಗೆ ಮಾಧ್ಯಮ ಆರ್ಥಿಕತೆಯನ್ನು ತುರ್ತಾಗಿ ಪುನಃಸ್ಥಾಪಿಸಬೇಕು. ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ಉಚಿತ, ವಿಶ್ವಾಸಾರ್ಹ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮಾಧ್ಯಮದ ಆರ್ಥಿಕ ಸ್ವಾತಂತ್ರ್ಯವು ಅಗತ್ಯವಾಗಿದೆ” ಎಂದು ಆನ್ ಬೊಕಾಂಡೆ ಹೇಳಿದ್ದಾರೆ.

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...