Homeಮುಖಪುಟ'ವಿಶ್ವ ಪತ್ರಿಕಾ ಸ್ವಾತಂತ್ರ್ಯ' ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

- Advertisement -
- Advertisement -

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು.

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ.

ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ ‘ಅತ್ಯಂತ ಗಂಭೀರ’ ಪರಿಸ್ಥಿತಿಯಲ್ಲಿಯೇ ಇದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025 Source: Reporters Without Borders

“ರಾಜಕೀಯ ಪ್ರಭಾವಿಗಳ ಕೈಯಲ್ಲಿ ಮಾಧ್ಯಮಗಳ ಮಾಲೀಕತ್ವದ ಕೇಂದ್ರೀಕರಣವು ಮಾಧ್ಯಮ ಬಹುತ್ವಕ್ಕೆ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಸೇರಿದೆ” ಎಂದು ವರದಿ ತಿಳಿಸಿದೆ.

ಅದಲ್ಲದೆ, ವರದಿಯು ಜಾಗತಿಕ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿಯನ್ನು ಮೊದಲ ಬಾರಿಗೆ ‘ಕಠಿಣ ಪರಿಸ್ಥಿತಿ’ಯಲ್ಲಿದೆ ಎಂದಿದೆ. ಮಾಧ್ಯಮ ದುರ್ಬಲಗೊಳ್ಳಲು ಕಾರಣವಾದ ಪ್ರಮುಖ ಅಂಶವೆಂದರೆ ‘ಆರ್ಥಿಕ ಒತ್ತಡ’ ಎಂದು ಹೇಳಿದೆ.

ಸೂಚ್ಯಂಕದಲ್ಲಿ ನೆರೆಯ ರಾಷ್ಟ್ರಗಳಲ್ಲಿ ನೇಪಾಳ (90ನೇ ಸ್ಥಾನ), ಮಾಲ್ಡೀವ್ಸ್ (104ನೇ ಸ್ಥಾನ), ಶ್ರೀಲಂಕಾ (139ನೇ ಸ್ಥಾನ), ಬಾಂಗ್ಲಾದೇಶ (149ನೇ ಸ್ಥಾನ)ಕ್ಕಿಂತ ಭಾರತ ಹಿಂದೆ ಇದ್ದರೆ, ಭೂತಾನ್ (152ನೇ ಸ್ಥಾನ), ಪಾಕಿಸ್ತಾನ (158ನೇ ಸ್ಥಾನ), ಮ್ಯಾನ್ಮಾರ್ (169 ನೇ ಸ್ಥಾನ), ಅಫ್ಘಾನಿಸ್ತಾನ (175ನೇ ಸ್ಥಾನ) ಮತ್ತು ಚೀನಾ (178ನೇ ಸ್ಥಾನ) ಕ್ಕಿಂತ ಉತ್ತಮ ಸ್ಥಾನದಲ್ಲಿದೆ.

ನಾರ್ವೆ, ಎಸ್ಟೋನಿಯಾ ಮತ್ತು ನೆದರ್‌ಲ್ಯಾಂಡ್ಸ್ ಮೊದಲ ಮೂರು ಸ್ಥಾನಗಳನ್ನು ಪಡೆದಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಮತ್ತು ಭದ್ರತೆ ಎಂಬ ಐದು ಅಂಶಗಳ ಆಧಾರದ ಮೇಲೆ ದೇಶಗಳಲ್ಲಿನ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡುತ್ತದೆ.

‘ಆರ್ಥಿಕ ಸ್ವಾತಂತ್ರ್ಯವಿಲ್ಲದೆ ಪತ್ರಿಕಾ ಸ್ವಾತಂತ್ರ್ಯವಿಲ್ಲ’ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ ಸಂಪಾದಕೀಯ ನಿರ್ದೇಶಕಿ ಆನ್ ಬೊಕಾಂಡೆ ಹೇಳಿದ್ದಾರೆ.

“ಸುದ್ದಿ ಮಾಧ್ಯಮಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ, ಗುಣಮಟ್ಟದ ವರದಿಗಾರಿಕೆಯನ್ನು ಕಡೆಗಣಿಸಿ ಪ್ರೇಕ್ಷಕರನ್ನು ಆಕರ್ಷಿಸುವ ಸ್ಪರ್ಧೆಗೆ ಇಳಿಯುತ್ತವೆ ಮತ್ತು ಅವರನ್ನು ಶೋಷಿಸಲು ಪ್ರಯತ್ನಿಸುವ ಬಂಡವಾಳಶಾಹಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ಬಲಿಯಾಗಬಹುದು”ಎಂದಿದ್ದಾರೆ.

“ಪತ್ರಿಕೋದ್ಯಮಕ್ಕೆ ಅನುಕೂಲಕರವಾದ ಮತ್ತು ಅಂತರ್ಗತವಾಗಿ ದುಬಾರಿಯಾಗಿರುವ ವಿಶ್ವಾಸಾರ್ಹ ಮಾಹಿತಿಯ ಉತ್ಪಾದನೆಯನ್ನು ಖಾತ್ರಿಪಡಿಸುವ ಸ್ಥಿತಿಗೆ ಮಾಧ್ಯಮ ಆರ್ಥಿಕತೆಯನ್ನು ತುರ್ತಾಗಿ ಪುನಃಸ್ಥಾಪಿಸಬೇಕು. ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ಉಚಿತ, ವಿಶ್ವಾಸಾರ್ಹ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮಾಧ್ಯಮದ ಆರ್ಥಿಕ ಸ್ವಾತಂತ್ರ್ಯವು ಅಗತ್ಯವಾಗಿದೆ” ಎಂದು ಆನ್ ಬೊಕಾಂಡೆ ಹೇಳಿದ್ದಾರೆ.

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...