Homeಮುಖಪುಟ'ವಿಶ್ವ ಪತ್ರಿಕಾ ಸ್ವಾತಂತ್ರ್ಯ' ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

- Advertisement -
- Advertisement -

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು.

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ.

ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ ‘ಅತ್ಯಂತ ಗಂಭೀರ’ ಪರಿಸ್ಥಿತಿಯಲ್ಲಿಯೇ ಇದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025 Source: Reporters Without Borders

“ರಾಜಕೀಯ ಪ್ರಭಾವಿಗಳ ಕೈಯಲ್ಲಿ ಮಾಧ್ಯಮಗಳ ಮಾಲೀಕತ್ವದ ಕೇಂದ್ರೀಕರಣವು ಮಾಧ್ಯಮ ಬಹುತ್ವಕ್ಕೆ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಸೇರಿದೆ” ಎಂದು ವರದಿ ತಿಳಿಸಿದೆ.

ಅದಲ್ಲದೆ, ವರದಿಯು ಜಾಗತಿಕ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿಯನ್ನು ಮೊದಲ ಬಾರಿಗೆ ‘ಕಠಿಣ ಪರಿಸ್ಥಿತಿ’ಯಲ್ಲಿದೆ ಎಂದಿದೆ. ಮಾಧ್ಯಮ ದುರ್ಬಲಗೊಳ್ಳಲು ಕಾರಣವಾದ ಪ್ರಮುಖ ಅಂಶವೆಂದರೆ ‘ಆರ್ಥಿಕ ಒತ್ತಡ’ ಎಂದು ಹೇಳಿದೆ.

ಸೂಚ್ಯಂಕದಲ್ಲಿ ನೆರೆಯ ರಾಷ್ಟ್ರಗಳಲ್ಲಿ ನೇಪಾಳ (90ನೇ ಸ್ಥಾನ), ಮಾಲ್ಡೀವ್ಸ್ (104ನೇ ಸ್ಥಾನ), ಶ್ರೀಲಂಕಾ (139ನೇ ಸ್ಥಾನ), ಬಾಂಗ್ಲಾದೇಶ (149ನೇ ಸ್ಥಾನ)ಕ್ಕಿಂತ ಭಾರತ ಹಿಂದೆ ಇದ್ದರೆ, ಭೂತಾನ್ (152ನೇ ಸ್ಥಾನ), ಪಾಕಿಸ್ತಾನ (158ನೇ ಸ್ಥಾನ), ಮ್ಯಾನ್ಮಾರ್ (169 ನೇ ಸ್ಥಾನ), ಅಫ್ಘಾನಿಸ್ತಾನ (175ನೇ ಸ್ಥಾನ) ಮತ್ತು ಚೀನಾ (178ನೇ ಸ್ಥಾನ) ಕ್ಕಿಂತ ಉತ್ತಮ ಸ್ಥಾನದಲ್ಲಿದೆ.

ನಾರ್ವೆ, ಎಸ್ಟೋನಿಯಾ ಮತ್ತು ನೆದರ್‌ಲ್ಯಾಂಡ್ಸ್ ಮೊದಲ ಮೂರು ಸ್ಥಾನಗಳನ್ನು ಪಡೆದಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಮತ್ತು ಭದ್ರತೆ ಎಂಬ ಐದು ಅಂಶಗಳ ಆಧಾರದ ಮೇಲೆ ದೇಶಗಳಲ್ಲಿನ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡುತ್ತದೆ.

‘ಆರ್ಥಿಕ ಸ್ವಾತಂತ್ರ್ಯವಿಲ್ಲದೆ ಪತ್ರಿಕಾ ಸ್ವಾತಂತ್ರ್ಯವಿಲ್ಲ’ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ ಸಂಪಾದಕೀಯ ನಿರ್ದೇಶಕಿ ಆನ್ ಬೊಕಾಂಡೆ ಹೇಳಿದ್ದಾರೆ.

“ಸುದ್ದಿ ಮಾಧ್ಯಮಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ, ಗುಣಮಟ್ಟದ ವರದಿಗಾರಿಕೆಯನ್ನು ಕಡೆಗಣಿಸಿ ಪ್ರೇಕ್ಷಕರನ್ನು ಆಕರ್ಷಿಸುವ ಸ್ಪರ್ಧೆಗೆ ಇಳಿಯುತ್ತವೆ ಮತ್ತು ಅವರನ್ನು ಶೋಷಿಸಲು ಪ್ರಯತ್ನಿಸುವ ಬಂಡವಾಳಶಾಹಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ಬಲಿಯಾಗಬಹುದು”ಎಂದಿದ್ದಾರೆ.

“ಪತ್ರಿಕೋದ್ಯಮಕ್ಕೆ ಅನುಕೂಲಕರವಾದ ಮತ್ತು ಅಂತರ್ಗತವಾಗಿ ದುಬಾರಿಯಾಗಿರುವ ವಿಶ್ವಾಸಾರ್ಹ ಮಾಹಿತಿಯ ಉತ್ಪಾದನೆಯನ್ನು ಖಾತ್ರಿಪಡಿಸುವ ಸ್ಥಿತಿಗೆ ಮಾಧ್ಯಮ ಆರ್ಥಿಕತೆಯನ್ನು ತುರ್ತಾಗಿ ಪುನಃಸ್ಥಾಪಿಸಬೇಕು. ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ಉಚಿತ, ವಿಶ್ವಾಸಾರ್ಹ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮಾಧ್ಯಮದ ಆರ್ಥಿಕ ಸ್ವಾತಂತ್ರ್ಯವು ಅಗತ್ಯವಾಗಿದೆ” ಎಂದು ಆನ್ ಬೊಕಾಂಡೆ ಹೇಳಿದ್ದಾರೆ.

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...