Homeಮುಖಪುಟವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

- Advertisement -
- Advertisement -

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ವರದಿಯು ತಿಳಿಸಿದೆ. ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತವು 159ನೇ ಸ್ಥಾನವನ್ನು ಪಡೆದುಕೊಂಡಿದೆ. ಪತ್ರಕರ್ತರ ಮೇಲಿನ ಹಿಂಸಾಚಾರ, ಕೇಂದ್ರೀಕೃತ ಮಾಧ್ಯಮ ಮಾಲೀಕತ್ವ ಮತ್ತು ರಾಜಕೀಯ ಹೊಂದಾಣಿಕೆಯಿಂದಾಗಿ ಪತ್ರಿಕಾ ಸ್ವಾತಂತ್ರ್ಯವು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಲ್ಲಿ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿದೆ.

ಕಳೆದ ವರ್ಷ ಭಾರತವು ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಲ್ಲಿತ್ತು. ಭಾರತವನ್ನು 2014ರಿಂದ ಬಿಜೆಪಿ  ಮತ್ತು ಹಿಂದೂ ಬಲಂಪಂಥೀಯ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಳುತ್ತಿದ್ದಾರೆ ಎಂದು ಆರ್‌ಎಸ್‌ಎಫ್ ಡೇಟಾವನ್ನು ಬಿಡುಗಡೆ ಮಾಡುವಾಗ ಹೇಳಿದೆ.

‘ಏಷ್ಯಾ-ಪೆಸಿಫಿಕ್: ನಿರಂಕುಶ ಸರ್ಕಾರಗಳ ನೊಗದಡಿಯಲ್ಲಿ ಪತ್ರಿಕಾ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯ ವರದಿಯಲ್ಲಿ ಭಾರತವನ್ನೂ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಿಂದ 159ನೇ ಸ್ಥಾನಕ್ಕೆ ತಲುಪಿದೆ. ಈ ಮೊದಲು ಭಾರತಕ್ಕಿಂತ ರ್ಯಾಂಕಿಂಗ್‌ನಲ್ಲಿ ಮೇಲೆ ಇದ್ದ ದೇಶಗಳು ಈ ಸಲ ಕಳಪೆ ನಿರ್ವಹಣೆಯನ್ನು ಪ್ರದರ್ಶಿಸಿರುವುದು ಇದಕ್ಕೆ ಕಾರಣವಾಗಿದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಇನ್ನಷ್ಟು ಕರಾಳ ಕಾನೂನುಗಳನ್ನು ಜಾರಿಗೊಳಿಸಿದ ಭಾರತವು ಎರಡು ರ್ಯಾಂಕ್ ಮೇಲಕ್ಕೇರಿದೆ. ಆದರೆ ಈ ಸ್ಥಾನವು ಪ್ರಜಾಪ್ರಭುತ್ವಕ್ಕೆ ಯೋಗ್ಯವೆನಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಯು  ಹದಗೆಟ್ಟಿದೆ ಎಂದು RSF ತನ್ನ ವರದಿಯಲ್ಲಿ ಹೇಳುತ್ತದೆ. ಪ್ರಧಾನಿಯವರ ವೈಯಕ್ತಿಕ ಸ್ನೇಹಿತ ಮುಖೇಶ್ ಅಂಬಾನಿ 70ಕ್ಕೂ ಹೆಚ್ಚು ಮಾಧ್ಯಮಗಳ ಮಾಲಿಕತ್ವವನ್ನು ಹೊಂದಿದ್ದಾರೆ. 2022ರ ಕೊನೆಯಲ್ಲಿ ಎನ್‌ಡಿಟಿವಿ ಚಾನೆಲ್‌ನ್ನು ಮೋದಿಯ ಇನ್ನೋರ್ವ ಸ್ನೇಹಿತ ಗೌತಮ್ ಅದಾನಿ ಸ್ವಾದೀನಪಡಿಸಿಕೊಂಡಿದ್ದಾರೆ ಮತ್ತು ಮುಖ್ಯವಾಹಿನಿಯ ಮಾಧ್ಯಮದಲ್ಲಿ ಬಹುತ್ವ ಅಂತ್ಯಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಪರ ಪ್ರಚಾರವನ್ನು ನಡೆಸುವ ಗೋದಿ ಮೀಡಿಯಾಗಳು ಹೆಚ್ಚಳವಾಗಿದೆ. ಒತ್ತಡ ಹಾಗೂ ಪ್ರಭಾವದಿಂದಾಗಿ ಭಾರತದ ಹಳೆಯ ಮಾದರಿಯಾದ ಬಹುತ್ವವಾದಿ ಪತ್ರಿಕಾ ಮಾಧ್ಯಮಗಳು ಪ್ರಶ್ನಿಸಲ್ಪಡುತ್ತಿದೆ. ಪ್ರಧಾನಿಯವರು ಪತ್ರಕರ್ತರ ಕಟು ಟೀಕಾಕಾರರಾಗಿದ್ದಾರೆ. ಸರ್ಕಾರವನ್ನು ಟೀಕಿಸುವ ಭಾರತೀಯ ಪತ್ರಕರ್ತರು ಕಿರುಕುಳಕ್ಕೆ ಒಳಗಾಗುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತಕ್ಕಿಂತ ನನರೆಯ ದೇಶಗಳು ಪತ್ರಿಕಾ ಸ್ವಾತಂತ್ರ್ಯದಲ್ಲಿ ಉತ್ತಮವಾದ ಸ್ಥಾನದಲ್ಲಿದೆ. ಪಾಕಿಸ್ತಾನ 152, ಶ್ರೀಲಂಕಾ 15, ನೇಪಾಳ 74 ಮತ್ತು ಮಾಲ್ಡೀವ್ಸ್ 106 ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ, ಹೆಚ್ಚಿನ ಸರ್ಕಾರಗಳು ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ, ಸ್ವತಂತ್ರ ಮತ್ತು ವೈವಿಧ್ಯಮಯ ಉತ್ತಮ ವಾತಾವರಣದ ಖಾತರಿದಾರರಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...