Homeಮುಖಪುಟವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

- Advertisement -
- Advertisement -

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ವರದಿಯು ತಿಳಿಸಿದೆ. ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತವು 159ನೇ ಸ್ಥಾನವನ್ನು ಪಡೆದುಕೊಂಡಿದೆ. ಪತ್ರಕರ್ತರ ಮೇಲಿನ ಹಿಂಸಾಚಾರ, ಕೇಂದ್ರೀಕೃತ ಮಾಧ್ಯಮ ಮಾಲೀಕತ್ವ ಮತ್ತು ರಾಜಕೀಯ ಹೊಂದಾಣಿಕೆಯಿಂದಾಗಿ ಪತ್ರಿಕಾ ಸ್ವಾತಂತ್ರ್ಯವು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಲ್ಲಿ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿದೆ.

ಕಳೆದ ವರ್ಷ ಭಾರತವು ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಲ್ಲಿತ್ತು. ಭಾರತವನ್ನು 2014ರಿಂದ ಬಿಜೆಪಿ  ಮತ್ತು ಹಿಂದೂ ಬಲಂಪಂಥೀಯ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಳುತ್ತಿದ್ದಾರೆ ಎಂದು ಆರ್‌ಎಸ್‌ಎಫ್ ಡೇಟಾವನ್ನು ಬಿಡುಗಡೆ ಮಾಡುವಾಗ ಹೇಳಿದೆ.

‘ಏಷ್ಯಾ-ಪೆಸಿಫಿಕ್: ನಿರಂಕುಶ ಸರ್ಕಾರಗಳ ನೊಗದಡಿಯಲ್ಲಿ ಪತ್ರಿಕಾ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯ ವರದಿಯಲ್ಲಿ ಭಾರತವನ್ನೂ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಿಂದ 159ನೇ ಸ್ಥಾನಕ್ಕೆ ತಲುಪಿದೆ. ಈ ಮೊದಲು ಭಾರತಕ್ಕಿಂತ ರ್ಯಾಂಕಿಂಗ್‌ನಲ್ಲಿ ಮೇಲೆ ಇದ್ದ ದೇಶಗಳು ಈ ಸಲ ಕಳಪೆ ನಿರ್ವಹಣೆಯನ್ನು ಪ್ರದರ್ಶಿಸಿರುವುದು ಇದಕ್ಕೆ ಕಾರಣವಾಗಿದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಇನ್ನಷ್ಟು ಕರಾಳ ಕಾನೂನುಗಳನ್ನು ಜಾರಿಗೊಳಿಸಿದ ಭಾರತವು ಎರಡು ರ್ಯಾಂಕ್ ಮೇಲಕ್ಕೇರಿದೆ. ಆದರೆ ಈ ಸ್ಥಾನವು ಪ್ರಜಾಪ್ರಭುತ್ವಕ್ಕೆ ಯೋಗ್ಯವೆನಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಯು  ಹದಗೆಟ್ಟಿದೆ ಎಂದು RSF ತನ್ನ ವರದಿಯಲ್ಲಿ ಹೇಳುತ್ತದೆ. ಪ್ರಧಾನಿಯವರ ವೈಯಕ್ತಿಕ ಸ್ನೇಹಿತ ಮುಖೇಶ್ ಅಂಬಾನಿ 70ಕ್ಕೂ ಹೆಚ್ಚು ಮಾಧ್ಯಮಗಳ ಮಾಲಿಕತ್ವವನ್ನು ಹೊಂದಿದ್ದಾರೆ. 2022ರ ಕೊನೆಯಲ್ಲಿ ಎನ್‌ಡಿಟಿವಿ ಚಾನೆಲ್‌ನ್ನು ಮೋದಿಯ ಇನ್ನೋರ್ವ ಸ್ನೇಹಿತ ಗೌತಮ್ ಅದಾನಿ ಸ್ವಾದೀನಪಡಿಸಿಕೊಂಡಿದ್ದಾರೆ ಮತ್ತು ಮುಖ್ಯವಾಹಿನಿಯ ಮಾಧ್ಯಮದಲ್ಲಿ ಬಹುತ್ವ ಅಂತ್ಯಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಪರ ಪ್ರಚಾರವನ್ನು ನಡೆಸುವ ಗೋದಿ ಮೀಡಿಯಾಗಳು ಹೆಚ್ಚಳವಾಗಿದೆ. ಒತ್ತಡ ಹಾಗೂ ಪ್ರಭಾವದಿಂದಾಗಿ ಭಾರತದ ಹಳೆಯ ಮಾದರಿಯಾದ ಬಹುತ್ವವಾದಿ ಪತ್ರಿಕಾ ಮಾಧ್ಯಮಗಳು ಪ್ರಶ್ನಿಸಲ್ಪಡುತ್ತಿದೆ. ಪ್ರಧಾನಿಯವರು ಪತ್ರಕರ್ತರ ಕಟು ಟೀಕಾಕಾರರಾಗಿದ್ದಾರೆ. ಸರ್ಕಾರವನ್ನು ಟೀಕಿಸುವ ಭಾರತೀಯ ಪತ್ರಕರ್ತರು ಕಿರುಕುಳಕ್ಕೆ ಒಳಗಾಗುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತಕ್ಕಿಂತ ನನರೆಯ ದೇಶಗಳು ಪತ್ರಿಕಾ ಸ್ವಾತಂತ್ರ್ಯದಲ್ಲಿ ಉತ್ತಮವಾದ ಸ್ಥಾನದಲ್ಲಿದೆ. ಪಾಕಿಸ್ತಾನ 152, ಶ್ರೀಲಂಕಾ 15, ನೇಪಾಳ 74 ಮತ್ತು ಮಾಲ್ಡೀವ್ಸ್ 106 ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ, ಹೆಚ್ಚಿನ ಸರ್ಕಾರಗಳು ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ, ಸ್ವತಂತ್ರ ಮತ್ತು ವೈವಿಧ್ಯಮಯ ಉತ್ತಮ ವಾತಾವರಣದ ಖಾತರಿದಾರರಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....