Homeಮುಖಪುಟವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

- Advertisement -
- Advertisement -

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ವರದಿಯು ತಿಳಿಸಿದೆ. ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತವು 159ನೇ ಸ್ಥಾನವನ್ನು ಪಡೆದುಕೊಂಡಿದೆ. ಪತ್ರಕರ್ತರ ಮೇಲಿನ ಹಿಂಸಾಚಾರ, ಕೇಂದ್ರೀಕೃತ ಮಾಧ್ಯಮ ಮಾಲೀಕತ್ವ ಮತ್ತು ರಾಜಕೀಯ ಹೊಂದಾಣಿಕೆಯಿಂದಾಗಿ ಪತ್ರಿಕಾ ಸ್ವಾತಂತ್ರ್ಯವು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಲ್ಲಿ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿದೆ.

ಕಳೆದ ವರ್ಷ ಭಾರತವು ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಲ್ಲಿತ್ತು. ಭಾರತವನ್ನು 2014ರಿಂದ ಬಿಜೆಪಿ  ಮತ್ತು ಹಿಂದೂ ಬಲಂಪಂಥೀಯ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಳುತ್ತಿದ್ದಾರೆ ಎಂದು ಆರ್‌ಎಸ್‌ಎಫ್ ಡೇಟಾವನ್ನು ಬಿಡುಗಡೆ ಮಾಡುವಾಗ ಹೇಳಿದೆ.

‘ಏಷ್ಯಾ-ಪೆಸಿಫಿಕ್: ನಿರಂಕುಶ ಸರ್ಕಾರಗಳ ನೊಗದಡಿಯಲ್ಲಿ ಪತ್ರಿಕಾ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯ ವರದಿಯಲ್ಲಿ ಭಾರತವನ್ನೂ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಿಂದ 159ನೇ ಸ್ಥಾನಕ್ಕೆ ತಲುಪಿದೆ. ಈ ಮೊದಲು ಭಾರತಕ್ಕಿಂತ ರ್ಯಾಂಕಿಂಗ್‌ನಲ್ಲಿ ಮೇಲೆ ಇದ್ದ ದೇಶಗಳು ಈ ಸಲ ಕಳಪೆ ನಿರ್ವಹಣೆಯನ್ನು ಪ್ರದರ್ಶಿಸಿರುವುದು ಇದಕ್ಕೆ ಕಾರಣವಾಗಿದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಇನ್ನಷ್ಟು ಕರಾಳ ಕಾನೂನುಗಳನ್ನು ಜಾರಿಗೊಳಿಸಿದ ಭಾರತವು ಎರಡು ರ್ಯಾಂಕ್ ಮೇಲಕ್ಕೇರಿದೆ. ಆದರೆ ಈ ಸ್ಥಾನವು ಪ್ರಜಾಪ್ರಭುತ್ವಕ್ಕೆ ಯೋಗ್ಯವೆನಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಯು  ಹದಗೆಟ್ಟಿದೆ ಎಂದು RSF ತನ್ನ ವರದಿಯಲ್ಲಿ ಹೇಳುತ್ತದೆ. ಪ್ರಧಾನಿಯವರ ವೈಯಕ್ತಿಕ ಸ್ನೇಹಿತ ಮುಖೇಶ್ ಅಂಬಾನಿ 70ಕ್ಕೂ ಹೆಚ್ಚು ಮಾಧ್ಯಮಗಳ ಮಾಲಿಕತ್ವವನ್ನು ಹೊಂದಿದ್ದಾರೆ. 2022ರ ಕೊನೆಯಲ್ಲಿ ಎನ್‌ಡಿಟಿವಿ ಚಾನೆಲ್‌ನ್ನು ಮೋದಿಯ ಇನ್ನೋರ್ವ ಸ್ನೇಹಿತ ಗೌತಮ್ ಅದಾನಿ ಸ್ವಾದೀನಪಡಿಸಿಕೊಂಡಿದ್ದಾರೆ ಮತ್ತು ಮುಖ್ಯವಾಹಿನಿಯ ಮಾಧ್ಯಮದಲ್ಲಿ ಬಹುತ್ವ ಅಂತ್ಯಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಪರ ಪ್ರಚಾರವನ್ನು ನಡೆಸುವ ಗೋದಿ ಮೀಡಿಯಾಗಳು ಹೆಚ್ಚಳವಾಗಿದೆ. ಒತ್ತಡ ಹಾಗೂ ಪ್ರಭಾವದಿಂದಾಗಿ ಭಾರತದ ಹಳೆಯ ಮಾದರಿಯಾದ ಬಹುತ್ವವಾದಿ ಪತ್ರಿಕಾ ಮಾಧ್ಯಮಗಳು ಪ್ರಶ್ನಿಸಲ್ಪಡುತ್ತಿದೆ. ಪ್ರಧಾನಿಯವರು ಪತ್ರಕರ್ತರ ಕಟು ಟೀಕಾಕಾರರಾಗಿದ್ದಾರೆ. ಸರ್ಕಾರವನ್ನು ಟೀಕಿಸುವ ಭಾರತೀಯ ಪತ್ರಕರ್ತರು ಕಿರುಕುಳಕ್ಕೆ ಒಳಗಾಗುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತಕ್ಕಿಂತ ನನರೆಯ ದೇಶಗಳು ಪತ್ರಿಕಾ ಸ್ವಾತಂತ್ರ್ಯದಲ್ಲಿ ಉತ್ತಮವಾದ ಸ್ಥಾನದಲ್ಲಿದೆ. ಪಾಕಿಸ್ತಾನ 152, ಶ್ರೀಲಂಕಾ 15, ನೇಪಾಳ 74 ಮತ್ತು ಮಾಲ್ಡೀವ್ಸ್ 106 ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ, ಹೆಚ್ಚಿನ ಸರ್ಕಾರಗಳು ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ, ಸ್ವತಂತ್ರ ಮತ್ತು ವೈವಿಧ್ಯಮಯ ಉತ್ತಮ ವಾತಾವರಣದ ಖಾತರಿದಾರರಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...