Homeಮುಖಪುಟವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

- Advertisement -
- Advertisement -

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ವರದಿಯು ತಿಳಿಸಿದೆ. ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತವು 159ನೇ ಸ್ಥಾನವನ್ನು ಪಡೆದುಕೊಂಡಿದೆ. ಪತ್ರಕರ್ತರ ಮೇಲಿನ ಹಿಂಸಾಚಾರ, ಕೇಂದ್ರೀಕೃತ ಮಾಧ್ಯಮ ಮಾಲೀಕತ್ವ ಮತ್ತು ರಾಜಕೀಯ ಹೊಂದಾಣಿಕೆಯಿಂದಾಗಿ ಪತ್ರಿಕಾ ಸ್ವಾತಂತ್ರ್ಯವು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಲ್ಲಿ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿದೆ.

ಕಳೆದ ವರ್ಷ ಭಾರತವು ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಲ್ಲಿತ್ತು. ಭಾರತವನ್ನು 2014ರಿಂದ ಬಿಜೆಪಿ  ಮತ್ತು ಹಿಂದೂ ಬಲಂಪಂಥೀಯ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಳುತ್ತಿದ್ದಾರೆ ಎಂದು ಆರ್‌ಎಸ್‌ಎಫ್ ಡೇಟಾವನ್ನು ಬಿಡುಗಡೆ ಮಾಡುವಾಗ ಹೇಳಿದೆ.

‘ಏಷ್ಯಾ-ಪೆಸಿಫಿಕ್: ನಿರಂಕುಶ ಸರ್ಕಾರಗಳ ನೊಗದಡಿಯಲ್ಲಿ ಪತ್ರಿಕಾ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯ ವರದಿಯಲ್ಲಿ ಭಾರತವನ್ನೂ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಿಂದ 159ನೇ ಸ್ಥಾನಕ್ಕೆ ತಲುಪಿದೆ. ಈ ಮೊದಲು ಭಾರತಕ್ಕಿಂತ ರ್ಯಾಂಕಿಂಗ್‌ನಲ್ಲಿ ಮೇಲೆ ಇದ್ದ ದೇಶಗಳು ಈ ಸಲ ಕಳಪೆ ನಿರ್ವಹಣೆಯನ್ನು ಪ್ರದರ್ಶಿಸಿರುವುದು ಇದಕ್ಕೆ ಕಾರಣವಾಗಿದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಇನ್ನಷ್ಟು ಕರಾಳ ಕಾನೂನುಗಳನ್ನು ಜಾರಿಗೊಳಿಸಿದ ಭಾರತವು ಎರಡು ರ್ಯಾಂಕ್ ಮೇಲಕ್ಕೇರಿದೆ. ಆದರೆ ಈ ಸ್ಥಾನವು ಪ್ರಜಾಪ್ರಭುತ್ವಕ್ಕೆ ಯೋಗ್ಯವೆನಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಯು  ಹದಗೆಟ್ಟಿದೆ ಎಂದು RSF ತನ್ನ ವರದಿಯಲ್ಲಿ ಹೇಳುತ್ತದೆ. ಪ್ರಧಾನಿಯವರ ವೈಯಕ್ತಿಕ ಸ್ನೇಹಿತ ಮುಖೇಶ್ ಅಂಬಾನಿ 70ಕ್ಕೂ ಹೆಚ್ಚು ಮಾಧ್ಯಮಗಳ ಮಾಲಿಕತ್ವವನ್ನು ಹೊಂದಿದ್ದಾರೆ. 2022ರ ಕೊನೆಯಲ್ಲಿ ಎನ್‌ಡಿಟಿವಿ ಚಾನೆಲ್‌ನ್ನು ಮೋದಿಯ ಇನ್ನೋರ್ವ ಸ್ನೇಹಿತ ಗೌತಮ್ ಅದಾನಿ ಸ್ವಾದೀನಪಡಿಸಿಕೊಂಡಿದ್ದಾರೆ ಮತ್ತು ಮುಖ್ಯವಾಹಿನಿಯ ಮಾಧ್ಯಮದಲ್ಲಿ ಬಹುತ್ವ ಅಂತ್ಯಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಪರ ಪ್ರಚಾರವನ್ನು ನಡೆಸುವ ಗೋದಿ ಮೀಡಿಯಾಗಳು ಹೆಚ್ಚಳವಾಗಿದೆ. ಒತ್ತಡ ಹಾಗೂ ಪ್ರಭಾವದಿಂದಾಗಿ ಭಾರತದ ಹಳೆಯ ಮಾದರಿಯಾದ ಬಹುತ್ವವಾದಿ ಪತ್ರಿಕಾ ಮಾಧ್ಯಮಗಳು ಪ್ರಶ್ನಿಸಲ್ಪಡುತ್ತಿದೆ. ಪ್ರಧಾನಿಯವರು ಪತ್ರಕರ್ತರ ಕಟು ಟೀಕಾಕಾರರಾಗಿದ್ದಾರೆ. ಸರ್ಕಾರವನ್ನು ಟೀಕಿಸುವ ಭಾರತೀಯ ಪತ್ರಕರ್ತರು ಕಿರುಕುಳಕ್ಕೆ ಒಳಗಾಗುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತಕ್ಕಿಂತ ನನರೆಯ ದೇಶಗಳು ಪತ್ರಿಕಾ ಸ್ವಾತಂತ್ರ್ಯದಲ್ಲಿ ಉತ್ತಮವಾದ ಸ್ಥಾನದಲ್ಲಿದೆ. ಪಾಕಿಸ್ತಾನ 152, ಶ್ರೀಲಂಕಾ 15, ನೇಪಾಳ 74 ಮತ್ತು ಮಾಲ್ಡೀವ್ಸ್ 106 ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ, ಹೆಚ್ಚಿನ ಸರ್ಕಾರಗಳು ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ, ಸ್ವತಂತ್ರ ಮತ್ತು ವೈವಿಧ್ಯಮಯ ಉತ್ತಮ ವಾತಾವರಣದ ಖಾತರಿದಾರರಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...