Homeಮುಖಪುಟವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

- Advertisement -
- Advertisement -

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ವರದಿಯು ತಿಳಿಸಿದೆ. ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತವು 159ನೇ ಸ್ಥಾನವನ್ನು ಪಡೆದುಕೊಂಡಿದೆ. ಪತ್ರಕರ್ತರ ಮೇಲಿನ ಹಿಂಸಾಚಾರ, ಕೇಂದ್ರೀಕೃತ ಮಾಧ್ಯಮ ಮಾಲೀಕತ್ವ ಮತ್ತು ರಾಜಕೀಯ ಹೊಂದಾಣಿಕೆಯಿಂದಾಗಿ ಪತ್ರಿಕಾ ಸ್ವಾತಂತ್ರ್ಯವು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಲ್ಲಿ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿದೆ.

ಕಳೆದ ವರ್ಷ ಭಾರತವು ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಲ್ಲಿತ್ತು. ಭಾರತವನ್ನು 2014ರಿಂದ ಬಿಜೆಪಿ  ಮತ್ತು ಹಿಂದೂ ಬಲಂಪಂಥೀಯ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಳುತ್ತಿದ್ದಾರೆ ಎಂದು ಆರ್‌ಎಸ್‌ಎಫ್ ಡೇಟಾವನ್ನು ಬಿಡುಗಡೆ ಮಾಡುವಾಗ ಹೇಳಿದೆ.

‘ಏಷ್ಯಾ-ಪೆಸಿಫಿಕ್: ನಿರಂಕುಶ ಸರ್ಕಾರಗಳ ನೊಗದಡಿಯಲ್ಲಿ ಪತ್ರಿಕಾ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯ ವರದಿಯಲ್ಲಿ ಭಾರತವನ್ನೂ ಉಲ್ಲೇಖಿಸಲಾಗಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ 161ನೇ ಸ್ಥಾನದಿಂದ 159ನೇ ಸ್ಥಾನಕ್ಕೆ ತಲುಪಿದೆ. ಈ ಮೊದಲು ಭಾರತಕ್ಕಿಂತ ರ್ಯಾಂಕಿಂಗ್‌ನಲ್ಲಿ ಮೇಲೆ ಇದ್ದ ದೇಶಗಳು ಈ ಸಲ ಕಳಪೆ ನಿರ್ವಹಣೆಯನ್ನು ಪ್ರದರ್ಶಿಸಿರುವುದು ಇದಕ್ಕೆ ಕಾರಣವಾಗಿದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಇನ್ನಷ್ಟು ಕರಾಳ ಕಾನೂನುಗಳನ್ನು ಜಾರಿಗೊಳಿಸಿದ ಭಾರತವು ಎರಡು ರ್ಯಾಂಕ್ ಮೇಲಕ್ಕೇರಿದೆ. ಆದರೆ ಈ ಸ್ಥಾನವು ಪ್ರಜಾಪ್ರಭುತ್ವಕ್ಕೆ ಯೋಗ್ಯವೆನಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಯು  ಹದಗೆಟ್ಟಿದೆ ಎಂದು RSF ತನ್ನ ವರದಿಯಲ್ಲಿ ಹೇಳುತ್ತದೆ. ಪ್ರಧಾನಿಯವರ ವೈಯಕ್ತಿಕ ಸ್ನೇಹಿತ ಮುಖೇಶ್ ಅಂಬಾನಿ 70ಕ್ಕೂ ಹೆಚ್ಚು ಮಾಧ್ಯಮಗಳ ಮಾಲಿಕತ್ವವನ್ನು ಹೊಂದಿದ್ದಾರೆ. 2022ರ ಕೊನೆಯಲ್ಲಿ ಎನ್‌ಡಿಟಿವಿ ಚಾನೆಲ್‌ನ್ನು ಮೋದಿಯ ಇನ್ನೋರ್ವ ಸ್ನೇಹಿತ ಗೌತಮ್ ಅದಾನಿ ಸ್ವಾದೀನಪಡಿಸಿಕೊಂಡಿದ್ದಾರೆ ಮತ್ತು ಮುಖ್ಯವಾಹಿನಿಯ ಮಾಧ್ಯಮದಲ್ಲಿ ಬಹುತ್ವ ಅಂತ್ಯಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಪರ ಪ್ರಚಾರವನ್ನು ನಡೆಸುವ ಗೋದಿ ಮೀಡಿಯಾಗಳು ಹೆಚ್ಚಳವಾಗಿದೆ. ಒತ್ತಡ ಹಾಗೂ ಪ್ರಭಾವದಿಂದಾಗಿ ಭಾರತದ ಹಳೆಯ ಮಾದರಿಯಾದ ಬಹುತ್ವವಾದಿ ಪತ್ರಿಕಾ ಮಾಧ್ಯಮಗಳು ಪ್ರಶ್ನಿಸಲ್ಪಡುತ್ತಿದೆ. ಪ್ರಧಾನಿಯವರು ಪತ್ರಕರ್ತರ ಕಟು ಟೀಕಾಕಾರರಾಗಿದ್ದಾರೆ. ಸರ್ಕಾರವನ್ನು ಟೀಕಿಸುವ ಭಾರತೀಯ ಪತ್ರಕರ್ತರು ಕಿರುಕುಳಕ್ಕೆ ಒಳಗಾಗುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತಕ್ಕಿಂತ ನನರೆಯ ದೇಶಗಳು ಪತ್ರಿಕಾ ಸ್ವಾತಂತ್ರ್ಯದಲ್ಲಿ ಉತ್ತಮವಾದ ಸ್ಥಾನದಲ್ಲಿದೆ. ಪಾಕಿಸ್ತಾನ 152, ಶ್ರೀಲಂಕಾ 15, ನೇಪಾಳ 74 ಮತ್ತು ಮಾಲ್ಡೀವ್ಸ್ 106 ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ, ಹೆಚ್ಚಿನ ಸರ್ಕಾರಗಳು ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ, ಸ್ವತಂತ್ರ ಮತ್ತು ವೈವಿಧ್ಯಮಯ ಉತ್ತಮ ವಾತಾವರಣದ ಖಾತರಿದಾರರಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...