Homeಮುಖಪುಟಭ್ರಷ್ಟಾಚಾರ ಸೂಚ್ಯಂಕ: 93ನೇ ಸ್ಥಾನದಲ್ಲಿರುವ ಭಾರತ

ಭ್ರಷ್ಟಾಚಾರ ಸೂಚ್ಯಂಕ: 93ನೇ ಸ್ಥಾನದಲ್ಲಿರುವ ಭಾರತ

- Advertisement -
- Advertisement -

2023ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕದಲ್ಲಿ ಭಾರತವು 180 ದೇಶಗಳಲ್ಲಿ 93ನೇ ಸ್ಥಾನದಲ್ಲಿದೆ, ಏಕೆಂದರೆ ಅದರ ಒಟ್ಟಾರೆ ಅಂಕ ಹೆಚ್ಚಾಗಿ ಬದಲಾಗದೆ ಉಳಿದಿದೆ ಎಂದು ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ವರದಿಯು ಬಹಿರಂಗಪಡಿಸಿದೆ.

ಸಾರ್ವಜನಿಕ ವಲಯದ ಭ್ರಷ್ಟಾಚಾರ ಗ್ರಹಿಕೆ ಮಟ್ಟಗಳ ಮೂಲಕ 180 ದೇಶಗಳು ಮತ್ತು ಪ್ರಾಂತ್ಯಗಳನ್ನು ಶ್ರೇಣೀಕರಿಸುವ ಸೂಚ್ಯಂಕವು 0 ರಿಂದ 100ರ ಪ್ರಮಾಣವನ್ನು ಬಳಸುತ್ತದೆ. ಅಲ್ಲಿ 0 ಹೆಚ್ಚು ಭ್ರಷ್ಟ ಮತ್ತು 100 ತುಂಬಾ ಸ್ವಚ್ಛವಾಗಿದೆ ಎಂದು ಪರಿಗಣಿಸಲಾಗುತ್ತದೆ. ಜಗತ್ತಿನ ಹಲವು ದೇಶಗಳಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಸಮರಗಳು ಹೆಚ್ಚು ಪರಿಣಾಮ ಬೀರಿದಂತೆ ಕಾಣುತ್ತಿಲ್ಲ ಎಂಬುವುದನ್ನು ಡೇಟಾವು ಬಹಿರಂಗಪಡಿಸಿದೆ.

180 ದೇಶಗಳ ಪೈಕಿ ಭಾರತ, ಮಾಲ್ಡೀವ್ಸ್, ಕಝಾಕಿಸ್ತಾನ್ ಮತ್ತು ಲೆಸೊಥೋ ಸೇರಿದಂತೆ ಐದು ದೇಶಗಳು 93ನೇ ಸ್ಥಾನ ಹಂಚಿಕೊಂಡಿದೆ. 2022ರಲ್ಲಿ ಭಾರತವು 85ನೇ ಸ್ಥಾನದಲ್ಲಿತ್ತು. 2023ರಲ್ಲಿ, ಡೆನ್ಮಾರ್ಕ್  ಸತತ ಆರನೇ ವರ್ಷಕ್ಕೆ ಸೂಚ್ಯಂಕದಲ್ಲಿ ಅಗ್ರಸ್ಥಾನದಲ್ಲಿದೆ. ಫಿನ್‌ಲ್ಯಾಂಡ್ ಮತ್ತು ನ್ಯೂಝಿಲ್ಯಾಂಡ್ ಕ್ರಮವಾಗಿ 87 ಮತ್ತು 85 ಅಂಕಗಳೊಂದಿಗೆ 2ನೇ ಮತ್ತು 3ನೇ ಸ್ಥಾನವನ್ನು ಪಡೆದುಕೊಂಡಿವೆ. ಸೊಮಾಲಿಯಾ ಕೊನೆಯ ಸ್ಥಾನದಲ್ಲಿದೆ. ವೆನೆಝುವೆಲಾ, ಸಿರಿಯಾ, ದಕ್ಷಿಣ ಸುಡಾನ್ ಮತ್ತು ಯೆಮೆನ್ ದೇಶಗಳು ಅತ್ಯಂತ ಕೆಳಮಟ್ಟದಲ್ಲಿದೆ.

2023ರಲ್ಲಿ ಭಾರತದ ಒಟ್ಟಾರೆ ಅಂಕ 39 ಆಗಿದ್ದರೆ, 2022ರಲ್ಲಿ ಅದು 40 ಆಗಿತ್ತು. 2022ರಲ್ಲಿ ಭಾರತದ ಶ್ರೇಣಿ 85 ಆಗಿತ್ತು. ಭಾರತವು 39 ಅಂಕಗಳ ಏರಿಳಿತಗಳನ್ನು ತೋರಿಸುತ್ತದೆ. ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನ (133) ಮತ್ತು ಶ್ರೀಲಂಕಾ (115) ಎರಡೂ ತಮ್ಮ ಸಾಲದ ಹೊರೆ ಮತ್ತು ನಂತರದ ರಾಜಕೀಯ ಅಸ್ಥಿರತೆಯನ್ನು ಎದುರಿಸುತ್ತಿವೆ ಎಂದು ವರದಿ ಹೇಳಿದೆ. ಉಭಯ ದೇಶಗಳು ಬಲವಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿವೆ, ಇದು ಸರ್ಕಾರವನ್ನು ಹಿಡಿತದಲ್ಲಿಡಲು ಸಹಾಯ ಮಾಡುತ್ತದೆ. ಪಾಕಿಸ್ತಾನದ ಸುಪ್ರೀಂಕೋರ್ಟ್ ತನ್ನ ಸಂವಿಧಾನದ 19A ಪರಿಚ್ಛೇದದ ಅಡಿಯಲ್ಲಿ ಈ ಹಕ್ಕನ್ನು ಈ ಹಿಂದೆ ನಿರ್ಬಂಧಿತ ಸಂಸ್ಥೆಗಳಿಗೆ ವಿಸ್ತರಿಸುವ ಮೂಲಕ ನಾಗರಿಕರ ಮಾಹಿತಿಯ ಹಕ್ಕನ್ನು ಬಲಪಡಿಸಿದೆ ಎಂದು ವರದಿ ಹೇಳಿದೆ.

ಬಾಂಗ್ಲಾದೇಶ (149) ಕಡಿಮೆ ಅಭಿವೃದ್ಧಿ ಹೊಂದಿದ ದೇಶ (ಎಲ್‌ಡಿಸಿ) ಸ್ಥಿತಿಯಿಂದ ಹೊರಹೊಮ್ಮಿದೆ ಎಂದು ವರದಿ ಹೇಳಿದೆ. ಆರ್ಥಿಕ ಬೆಳವಣಿಗೆಯು ಬಡತನದ ನಿರಂತರ ಕಡಿತ ಮತ್ತು ಜೀವನ ಪರಿಸ್ಥಿತಿಗಳನ್ನು ಸುಧಾರಿಸುತ್ತದೆ. ನೆರೆಯ ರಾಷ್ಟ್ರ ಚೀನಾ 76 ಅಂಕ ಪಡೆದು 42ನೇ ಸ್ಥಾನದಲ್ಲಿದೆ. ಕಳೆದ ದಶಕದಲ್ಲಿ ಭ್ರಷ್ಟಾಚಾರಕ್ಕಾಗಿ 3.7 ದಶಲಕ್ಷಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಶಿಕ್ಷಿಸುವ ಮೂಲಕ ಚೀನಾ 76 ಅಂಕಗಳೊಂದಿಗೆ ಭ್ರಷ್ಟಾಚಾರ-ವಿರೋಧಿ ಕ್ರಮಗಳಲ್ಲಿ ಮುಂದಿದೆ. ಸಾಂಸ್ಥಿಕ ತಪಾಸಣೆಗಿಂತ ಹೆಚ್ಚಾಗಿ ಶಿಕ್ಷೆಯ ಮೇಲೆ ಚೀನಾದ ಭಾರೀ ಅವಲಂಬನೆಯು ಭ್ರಷ್ಟಾಚಾರ-ವಿರೋಧಿ ಕ್ರಮಗಳ ದೀರ್ಘಕಾಲೀನ ಪರಿಣಾಮಕಾರಿತ್ವದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ವರದಿ ಹೇಳಿದೆ.

ಏಷ್ಯಾ ಪೆಸಿಫಿಕ್ ಪ್ರದೇಶವು 2024ರ ದೊಡ್ಡ ಚುನಾವಣಾ ವರ್ಷವನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಬಾಂಗ್ಲಾದೇಶ, ಭಾರತ, ಇಂಡೋನೇಷ್ಯಾ, ಪಾಕಿಸ್ತಾನ, ಸೊಲೊಮನ್ ದ್ವೀಪಗಳು, ದಕ್ಷಿಣ ಕೊರಿಯಾ ಮತ್ತು ತೈವಾನ್‌ನಲ್ಲಿ ಮತದಾನ ನಡೆಯಲಿೆದೆ.  2023ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (CPI) ಭ್ರಷ್ಟಾಚಾರವನ್ನು ನಿಗ್ರಹಿಸುವ ನಿಟ್ಟಿನಲ್ಲಿ ಯಾವುದೇ ಅರ್ಥಪೂರ್ಣ ಪ್ರಗತಿಯಿಲ್ಲದ ಇನ್ನೊಂದು ವರ್ಷವನ್ನು ಬಹಿರಂಗಪಡಿಸುತ್ತದೆ. ಕೆಲವೇ ಕೆಲ ದೇಶಗಳು ಭ್ರಷ್ಟಾಚಾರದ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತೋರಿಸುತ್ತವೆ. ಏಷ್ಯಾ ಮತ್ತು ಪೆಸಿಫಿಕ್‌ನಾದ್ಯಂತದ 71 ಪ್ರತಿಶತದಷ್ಟು ದೇಶಗಳಲ್ಲಿ CPI ಸ್ಕೋರ್ ಪ್ರಾದೇಶಿಕ ಸರಾಸರಿ ಸ್ಕೋರ್ 45ಕ್ಕಿಂತ ಕಡಿಮೆ ಮತ್ತು ಜಾಗತಿಕ ಸರಾಸರಿ 100 ರಲ್ಲಿ 43 ಆಗಿದೆ ಎಂದು ವರದಿಯು ಹೇಳಿದೆ.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...