Homeಕರೋನಾ ತಲ್ಲಣಸ್ಪುಟ್ನಿಕ್ ಲೈಟ್ ಲಸಿಕೆ ತಯಾರಿಸಲು ಸಜ್ಜಾದ ಭಾರತ

ಸ್ಪುಟ್ನಿಕ್ ಲೈಟ್ ಲಸಿಕೆ ತಯಾರಿಸಲು ಸಜ್ಜಾದ ಭಾರತ

- Advertisement -
- Advertisement -

ರಷ್ಯಾದ ಸ್ಪುಟ್ನಿಕ್ ಲೈಟ್ ಕೋವಿಡ್ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಭಾರತದೊಂದಿಗೆ ಮಾತುಕತೆ ಮುಕ್ತಾಯದ ಹಂತದಲ್ಲಿದೆ ಮತ್ತು ಸ್ಪುಟ್ನಿಕ್ ವಿ ತಯಾರಿಕೆಯ ಒಪ್ಪಂದವನ್ನು ಸಹ ಕಾರ್ಯಗತಗೊಳಿಸಲಾಗುತ್ತಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಸೋಮವಾರ ಬಹಿರಂಗಪಡಿಸಿದ್ದಾರೆ. ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗಿನ 2+2 ಸಭೆಯ ನಂತರ ಲಾವ್ರೊವ್ ಈ ಹೇಳಿಕೆ ನೀಡಿದ್ದಾರೆ.

“ಪ್ರತಿ ವರ್ಷ ಸುಮಾರು ನೂರು ಮಿಲಿಯನ್ ಡೋಸ್‌ಗಳಷ್ಟು ದೊಡ್ಡ ಪ್ರಮಾಣದಲ್ಲಿ ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದ್ದಾರೆಂದು ರಷ್ಯಾದ ಸುದ್ದಿ ಸಂಸ್ಥೆ TASS ಉಲ್ಲೇಖಿಸಿದೆ. ಸೆಪ್ಟೆಂಬರ್ ಮಧ್ಯದಲ್ಲಿ, ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅಡಿಯಲ್ಲಿ ತಜ್ಞರ ಸಮಿತಿಯು ಭಾರತದಲ್ಲಿ ಸ್ಪುಟ್ನಿಕ್ ಲೈಟ್ ಅಧ್ಯಯನದ ಮೂರನೇ (ಅಂತಿಮ) ಹಂತದ ಮಧ್ಯಂತರ ಪರೀಕ್ಷೆಗಳಿಗೆ ಅನುಮತಿಯನ್ನು ನೀಡಿತು.

ಇದನ್ನೂ ಓದಿ:ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

ದೇಶದಲ್ಲಿ ಭವಿಷ್ಯದ ಉತ್ಪಾದನೆಯ ಭರವಸೆಯೊಂದಿಗೆ ಸ್ಪುಟ್ನಿಕ್ ಲೈಟ್ ಪ್ರಯತ್ನವನ್ನು ಬೆಂಬಲಿಸುತ್ತಿರುವ ರಷ್ಯಾದ ನೇರ ಹೂಡಿಕೆ ನಿಧಿ (RDIF)ಯು 12-17 ವರ್ಷ ವಯಸ್ಸಿನ ಹದಿಹರೆಯದವರಿಗೆ ಉದ್ದೇಶಿಸಿರುವ ಸ್ಪುಟ್ನಿಕ್ M ಲಸಿಕೆಯ ವಿವರಗಳನ್ನು ಭಾರತೀಯ ನಿಯಂತ್ರಕರಿಗೆ ಒದಗಿಸಿದೆ ಎಂದು ಬಹಿರಂಗಪಡಿಸಿದೆ.

ರಷ್ಯಾದ ನೇರ ಹೂಡಿಕೆ ನಿಧಿಯ ಸಿಇಒ ಕಿರಿಲ್ ಡಿಮಿಟ್ರಿವ್ ಅವರು ಸ್ಪುಟ್ನಿಕ್ ಲೈಟ್ ಉತ್ಪಾದನೆಯನ್ನು ಭಾರತದ ಅತಿದೊಡ್ಡ ಲಸಿಕೆ ಉತ್ಪಾದಕರಾದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಹಯೋಗದೊಂದಿಗೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. “ನಾವು ಡಿಸೆಂಬರ್‌ನಲ್ಲಿ ಭಾರತದಲ್ಲಿ ಸ್ಪುಟ್ನಿಕ್ ಲೈಟ್ ಅನ್ನು ಪ್ರಾರಂಭಿಸುವ ಭರವಸೆ ಹೊಂದಿದ್ದೇವೆ ಮತ್ತು ಭಾರತೀಯ ಸಂಸ್ಥೆಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಭಾರತವು ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಅಸ್ಟ್ರಾಜೆನೆಕಾದ ಕೋವಿಶೀಲ್ಡ್, ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳನ್ನು ಬಳಸುತ್ತಿದೆ. ಮಾಡರ್ನಾ ಮತ್ತು ಜಾನ್ಸನ್ ಆಂಡ್‌ ಜಾನ್ಸನ್ ಸಹ ಭಾರತೀಯರಿಗೆ ಲಸಿಕೆಗಳನ್ನು ಬಿಡುಗಡೆ ಮಾಡಲು ಅನುಮತಿಗಾಗಿ ಅರ್ಜಿ ಸಲ್ಲಿಸಿವೆ.

ಇದನ್ನೂ ಓದಿ:ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...