Homeಕರೋನಾ ತಲ್ಲಣದೇಶದಲ್ಲಿ 31,923 ಹೊಸ ಕೊರೊನಾ ಪ್ರಕರಣಗಳು ಪತ್ತೆ: ನಿನ್ನೆಗಿಂತ 18 % ಹೆಚ್ಚಳ

ದೇಶದಲ್ಲಿ 31,923 ಹೊಸ ಕೊರೊನಾ ಪ್ರಕರಣಗಳು ಪತ್ತೆ: ನಿನ್ನೆಗಿಂತ 18 % ಹೆಚ್ಚಳ

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 31,923 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಇದು ನಿನ್ನೆ (ಬುಧವಾರ) ದಾಖಲಾಗಿದ್ದ 26,964 ಪ್ರಕರಣಗಳ ಅಂಕಿಅಂಶಗಳಿಗಿಂತ 18 % ಹೆಚ್ಚಾಗಿದೆ. ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,01,640 ಆಗಿವೆ.

ಅತಿಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವ ಕೇರಳದಲ್ಲಿ 19,675 ಹೊಸ ಪ್ರಕರಣಗಳು ಮತ್ತು 142 ಸಾವುಗಳು ದಾಖಲಾಗಿದೆ. ಮಂಗಳವಾರದಿಂದ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 19,702 ವಾಗಿದೆ. ಪ್ರಸ್ತುತ ವಿವಿಧ ಜಿಲ್ಲೆಗಳಲ್ಲಿ 4,81,195 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 4,57,822 ಜನರು ಮನೆ ಅಥವಾ ಕ್ಯಾರಂಟೈನ್ ಕೇಂದ್ರಗಳಲ್ಲಿದ್ದರೆ, 23,373 ಮಂದಿ ಆಸ್ಪತ್ರೆಗಳಲ್ಲಿ ಇದ್ದಾರೆ.

ಮಹಾರಾಷ್ಟ್ರದಲ್ಲಿ 3,608 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 65,31,237 ಕ್ಕೆ ಏರಿದೆ. 24 ಗಂಟೆಯಲ್ಲಿ 48 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,38,664 ಕ್ಕೆ ತಲುಪಿದೆ. 39,984 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

ಸಕ್ರಿಯ ಪ್ರಕರಣಗಳ ಒಟ್ಟು ಸೋಂಕಿನ ಪ್ರಮಾಣ 0.90 ಪ್ರತಿಶತದಷ್ಟಿದ್ದು, ಕಳೆದ ವರ್ಷ ಮಾರ್ಚ್‌ನಿಂದ ಅತ್ಯಂತ ಕಡಿಮೆಯಾಗಿದೆ. ಚೇತರಿಕೆಯ ಪ್ರಮಾಣವು 97.77 ಶೇಕಡಾ ದಾಖಲಾಗಿದೆ, ಇದು ಮಾರ್ಚ್ 2020 ರ ನಂತರ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ  ಇದುವರೆಗೆ 83.39 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದಿದೆ.

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯ ಸರ್ಕಾರಗಳಿಂದ 50,000 ಸಾವಿರ  ಪರಿಹಾರ ನೀಡಲಾಗುತ್ತದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈಗಾಗಲೇ ಸಂಭವಿಸಿರುವ ಸಾವುಗಳಿಗೆ ಮಾತ್ರವಲ್ಲದೆ ಭವಿಷ್ಯದಲ್ಲಿ ಉಂಟಾಗುವ ಸಾವುಗಳಿಗೂ ಪರಿಹಾರ ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಜನವರಿ 2020 ರಲ್ಲಿ ಸಾಂಕ್ರಾಮಿಕ ರೋಗದ ತೀವ್ರತೆಗೆ ದೇಶದಲ್ಲಿ 4.45 ಲಕ್ಷಕ್ಕೂ ಹೆಚ್ಚುಜನರು ಬಲಿಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಆದರೆ, ಸಾವುಗಳ ಲೆಕ್ಕ ಸರಿಯಿಲ್ಲ ಎಂದು ಅನೇಕ ಸಂಘ, ಸಂಸ್ಥೆಗಳು, ಸಾಮಾಜಿಕ ಹೋರಾಟಗಾರರು ಆರೋಪಿಸಿದ್ದಾರೆ.

ಬಿಹಾರ, ಮಧ್ಯಪ್ರದೇಶ ಮತ್ತು ದೆಹಲಿಯಂತಹ ಕೆಲವು ರಾಜ್ಯಗಳು ಈಗಾಗಲೇ ಕೋವಿಡ್‌ಗೆ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿವೆ.


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...