Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...