Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....